BREAKING NEWS

ಬೆಂ-ಮೈ ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ: ಜು.1ರಿಂದ​ ಆರಂಭ- ಇಲ್ಲಿದೆ ಟೋಲ್ ದರ ವಿವರ

 ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್  ಆರಂಭಕ್ಕೆ ಸಜ್ಜಾಗಿದೆ.

ಜುಲೈ 1ರಿಂದ ಮಂಡ್ಯ ವ್ಯಾಪ್ತಿಯ ಟೋಲ್ ಸಂಗ್ರಹ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯ 55-134 ಕಿಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಟೋಲ್ ಪ್ಲಾಜಾ ನಿರ್ಮಿಸಿದೆ. ಹಾಗಾದ್ರೆ, ಯಾವ-ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಏಕಮುಖ ಸಂಚಾರಕ್ಕೆ ನಿಗದಿ ಮಾಡಿರುವ ಟೋಲ್ ಹಣ

  • ಕಾರು, ಜೀಪು, ವ್ಯಾನು – 155 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 525 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ.
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ.
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ.
  • ಅದೇ ದಿನ ಹೋಗಿಬರುವುದಕ್ಕೆ

    • ಕಾರು, ಜೀಪು, ವ್ಯಾನು – 235 ರೂ
    • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ
    • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ
    • ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ
    • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ
    • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ
    • ಮಂಡ್ಯ ಜಿಲ್ಲೆ ಒಳಗಿನ ವಾಹನಗಳಿಗೆ

      • ಕಾರು, ಜೀಪು, ವ್ಯಾನ್‌ – 80 ರೂ.
      • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ.
      • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ.
      • ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ
      • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ
      • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ
andolanait

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

12 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

13 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

13 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

13 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

13 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

14 hours ago