BREAKING NEWS

ಬೆಂ-ಮೈ ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ: ಜು.1ರಿಂದ​ ಆರಂಭ- ಇಲ್ಲಿದೆ ಟೋಲ್ ದರ ವಿವರ

 ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್  ಆರಂಭಕ್ಕೆ ಸಜ್ಜಾಗಿದೆ.

ಜುಲೈ 1ರಿಂದ ಮಂಡ್ಯ ವ್ಯಾಪ್ತಿಯ ಟೋಲ್ ಸಂಗ್ರಹ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯ 55-134 ಕಿಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಟೋಲ್ ಪ್ಲಾಜಾ ನಿರ್ಮಿಸಿದೆ. ಹಾಗಾದ್ರೆ, ಯಾವ-ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಏಕಮುಖ ಸಂಚಾರಕ್ಕೆ ನಿಗದಿ ಮಾಡಿರುವ ಟೋಲ್ ಹಣ

  • ಕಾರು, ಜೀಪು, ವ್ಯಾನು – 155 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 525 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ.
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ.
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ.
  • ಅದೇ ದಿನ ಹೋಗಿಬರುವುದಕ್ಕೆ

    • ಕಾರು, ಜೀಪು, ವ್ಯಾನು – 235 ರೂ
    • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ
    • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ
    • ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ
    • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ
    • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ
    • ಮಂಡ್ಯ ಜಿಲ್ಲೆ ಒಳಗಿನ ವಾಹನಗಳಿಗೆ

      • ಕಾರು, ಜೀಪು, ವ್ಯಾನ್‌ – 80 ರೂ.
      • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ.
      • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ.
      • ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ
      • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ
      • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ
andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago