BREAKING NEWS

ಬೆಂ-ಮೈ ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ: ಜು.1ರಿಂದ​ ಆರಂಭ- ಇಲ್ಲಿದೆ ಟೋಲ್ ದರ ವಿವರ

 ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್  ಆರಂಭಕ್ಕೆ ಸಜ್ಜಾಗಿದೆ.

ಜುಲೈ 1ರಿಂದ ಮಂಡ್ಯ ವ್ಯಾಪ್ತಿಯ ಟೋಲ್ ಸಂಗ್ರಹ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯ 55-134 ಕಿಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಟೋಲ್ ಪ್ಲಾಜಾ ನಿರ್ಮಿಸಿದೆ. ಹಾಗಾದ್ರೆ, ಯಾವ-ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಏಕಮುಖ ಸಂಚಾರಕ್ಕೆ ನಿಗದಿ ಮಾಡಿರುವ ಟೋಲ್ ಹಣ

  • ಕಾರು, ಜೀಪು, ವ್ಯಾನು – 155 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 525 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ.
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ.
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ.
  • ಅದೇ ದಿನ ಹೋಗಿಬರುವುದಕ್ಕೆ

    • ಕಾರು, ಜೀಪು, ವ್ಯಾನು – 235 ರೂ
    • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ
    • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ
    • ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ
    • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ
    • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ
    • ಮಂಡ್ಯ ಜಿಲ್ಲೆ ಒಳಗಿನ ವಾಹನಗಳಿಗೆ

      • ಕಾರು, ಜೀಪು, ವ್ಯಾನ್‌ – 80 ರೂ.
      • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ.
      • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ.
      • ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ
      • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ
      • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ
andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago