BREAKING NEWS

ಬಾಲಸೋರ್ ರೈಲು ದುರಂತ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ದುರಂತ : ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ದುರ್ಮರಣ

ಒಡಿಶಾ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಒಡಿಶಾದ ಜಾಜ್’ಪುರ ರೈಲು ನಿಲ್ದಾಣದಲ್ಲಿ ಮನಕಲುಕುವ ದುರ್ಘಟನೆ ಬುಧವಾ ನಡೆದಿದೆ. ಘಟನೆಯಲ್ಲಿ ಮೂರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಲ್ದಾಣದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಗುಡುಗು ಸಹಿತ ಭಾರೀ ಮಳೆ ಸುರಿಯಲಾರಂಭಿಸಿದೆ. ಈ ವೇಳೆ ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಕಾರ್ಮಿಕರು ಆಶ್ರಯ ಪಡೆದುಕೊಂಡಿದ್ದಾರೆ.

ಈ ವೇಳೆ ದಿಢೀರನೆ ರೈಲು ಚಲಿಸಲಾರಂಭಿಸಿದ್ದು, ಅದರಡಿಯಲ್ಲಿ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.ದಿಢೀರ್ ಗುಡುಗು ಸಹಿತ ಮಳೆಯಾಯಿತು. ಗೂಡ್ಸ್ ರೈಲು ನಿಂತಿದ್ದ ರೈಲ್ವೇ ಸೈಡಿಂಗ್‌ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಮಳೆ ಹಿನ್ನೆಲೆಯಲ್ಲಿ ಕಾರ್ಮಿಕರು ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಆದರೆ, ದುರದೃಷ್ಟವಶಾತ್, ಎಂಜಿನ್ ಅನ್ನು ಜೋಡಿಸದ ಗೂಡ್ಸ್ ರೈಲು ಚಲಿಸಲು ಪ್ರಾರಂಭಿಸಿತು, ಇದೇ ಅಪಘಾತಕ್ಕೆ ಕಾರಣವಾಯಿತು ಎಂದು ರೈಲ್ವೇ ವಕ್ತಾರರು ಮಾಹಿತಿ ನೀಡಿದ್ದಾರೆ.

ಘಟನೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.ಗಾಯಗೊಂಡಿರುವ ಕಾರ್ಮಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

lokesh

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago