ಭುವನೇಶ್ವರ : 275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ.
ಒಡಿಶಾದ ಬಾರ್ಗಡ್ ಜಿಲ್ಲೆಯಲ್ಲಿ ಸರಕು ಸಾಗಾಣಿಕಾ ರೈಲು ಹಳಿ ತಪ್ಪಿದ್ದು, ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಈ ವರೆಗೂ ಯಾವುದೇ ಸಾವು-ನೋವು ವರದಿಯಾಗಿಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ರೈಲ್ವೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸುಣ್ಣದಕಲ್ಲು ಹೊತ್ತೊಯ್ಯುತ್ತಿದ್ದ ಸರಕು ರೈಲು ಇತ್ತೀಚೆಗೆ ಅಪಘಾತಕ್ಕೀಡಾದ ಸ್ಥಳದಿಂದ ಸುಮಾರು 500 ಕಿಮೀ ದೂರದಲ್ಲಿರುವ ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
3 ದಿನಗಳ ಹಿಂದಷ್ಟೇ ಇದೇ ಒಡಿಶಾದ ಬಾಲಾಸೋರ್ ನಲ್ಲಿ ಮೂರು ರೈಲುಗಳ ಅಪಘಾತವಾಗಿ 275 ಮಂದಿ ಸಾವಿಗೀಡಾಗಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಮೊದಲು ರೈಲೊಂದು ಹಳಿ ತಪ್ಪಿ, ಬಳಿಕ ಅದಕ್ಕೆ ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲು ಢಿಕ್ಕಿಯಾಗಿ ಇತಿಹಾಸದ ಭೀಕರ ರೈಲು ದುರಂತ ಸಂಭವಿಸಿತ್ತು.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…