ಭುವನೇಶ್ವರ : 275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ.
ಒಡಿಶಾದ ಬಾರ್ಗಡ್ ಜಿಲ್ಲೆಯಲ್ಲಿ ಸರಕು ಸಾಗಾಣಿಕಾ ರೈಲು ಹಳಿ ತಪ್ಪಿದ್ದು, ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಈ ವರೆಗೂ ಯಾವುದೇ ಸಾವು-ನೋವು ವರದಿಯಾಗಿಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ರೈಲ್ವೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸುಣ್ಣದಕಲ್ಲು ಹೊತ್ತೊಯ್ಯುತ್ತಿದ್ದ ಸರಕು ರೈಲು ಇತ್ತೀಚೆಗೆ ಅಪಘಾತಕ್ಕೀಡಾದ ಸ್ಥಳದಿಂದ ಸುಮಾರು 500 ಕಿಮೀ ದೂರದಲ್ಲಿರುವ ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
3 ದಿನಗಳ ಹಿಂದಷ್ಟೇ ಇದೇ ಒಡಿಶಾದ ಬಾಲಾಸೋರ್ ನಲ್ಲಿ ಮೂರು ರೈಲುಗಳ ಅಪಘಾತವಾಗಿ 275 ಮಂದಿ ಸಾವಿಗೀಡಾಗಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಮೊದಲು ರೈಲೊಂದು ಹಳಿ ತಪ್ಪಿ, ಬಳಿಕ ಅದಕ್ಕೆ ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲು ಢಿಕ್ಕಿಯಾಗಿ ಇತಿಹಾಸದ ಭೀಕರ ರೈಲು ದುರಂತ ಸಂಭವಿಸಿತ್ತು.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…