ಭುವನೇಶ್ವರ : 275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ.
ಒಡಿಶಾದ ಬಾರ್ಗಡ್ ಜಿಲ್ಲೆಯಲ್ಲಿ ಸರಕು ಸಾಗಾಣಿಕಾ ರೈಲು ಹಳಿ ತಪ್ಪಿದ್ದು, ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಈ ವರೆಗೂ ಯಾವುದೇ ಸಾವು-ನೋವು ವರದಿಯಾಗಿಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ರೈಲ್ವೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸುಣ್ಣದಕಲ್ಲು ಹೊತ್ತೊಯ್ಯುತ್ತಿದ್ದ ಸರಕು ರೈಲು ಇತ್ತೀಚೆಗೆ ಅಪಘಾತಕ್ಕೀಡಾದ ಸ್ಥಳದಿಂದ ಸುಮಾರು 500 ಕಿಮೀ ದೂರದಲ್ಲಿರುವ ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
3 ದಿನಗಳ ಹಿಂದಷ್ಟೇ ಇದೇ ಒಡಿಶಾದ ಬಾಲಾಸೋರ್ ನಲ್ಲಿ ಮೂರು ರೈಲುಗಳ ಅಪಘಾತವಾಗಿ 275 ಮಂದಿ ಸಾವಿಗೀಡಾಗಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಮೊದಲು ರೈಲೊಂದು ಹಳಿ ತಪ್ಪಿ, ಬಳಿಕ ಅದಕ್ಕೆ ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲು ಢಿಕ್ಕಿಯಾಗಿ ಇತಿಹಾಸದ ಭೀಕರ ರೈಲು ದುರಂತ ಸಂಭವಿಸಿತ್ತು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…