ಭುವನೇಶ್ವರ : 275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ.
ಒಡಿಶಾದ ಬಾರ್ಗಡ್ ಜಿಲ್ಲೆಯಲ್ಲಿ ಸರಕು ಸಾಗಾಣಿಕಾ ರೈಲು ಹಳಿ ತಪ್ಪಿದ್ದು, ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಈ ವರೆಗೂ ಯಾವುದೇ ಸಾವು-ನೋವು ವರದಿಯಾಗಿಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ರೈಲ್ವೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸುಣ್ಣದಕಲ್ಲು ಹೊತ್ತೊಯ್ಯುತ್ತಿದ್ದ ಸರಕು ರೈಲು ಇತ್ತೀಚೆಗೆ ಅಪಘಾತಕ್ಕೀಡಾದ ಸ್ಥಳದಿಂದ ಸುಮಾರು 500 ಕಿಮೀ ದೂರದಲ್ಲಿರುವ ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
3 ದಿನಗಳ ಹಿಂದಷ್ಟೇ ಇದೇ ಒಡಿಶಾದ ಬಾಲಾಸೋರ್ ನಲ್ಲಿ ಮೂರು ರೈಲುಗಳ ಅಪಘಾತವಾಗಿ 275 ಮಂದಿ ಸಾವಿಗೀಡಾಗಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಮೊದಲು ರೈಲೊಂದು ಹಳಿ ತಪ್ಪಿ, ಬಳಿಕ ಅದಕ್ಕೆ ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲು ಢಿಕ್ಕಿಯಾಗಿ ಇತಿಹಾಸದ ಭೀಕರ ರೈಲು ದುರಂತ ಸಂಭವಿಸಿತ್ತು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…