ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು.
ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್ ಸರಿಯಾಗಿ ಊಟ, ನಿದ್ದೆ ಮಾಡಿಲ್ಲ. ಇಂತಹ ಕಷ್ಟದಲ್ಲಿ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದರು.
ಡಿಕೆಶಿ ಗಡ್ಡ ಏಕೆ ಬಿಟ್ಡಿದ್ದಾರೆ ಎಂದು ಕೇಳುತ್ತಾರೆ. ಇದಕ್ಕೆ ಉತ್ತರ ಕೊಡಬೇಕಾಗಿರುವುದು ಕ್ಷೇತ್ರದ ಜನತೆ. ಈಗ ಅದಕ್ಕೆ ಉತ್ತರ ಕೊಡುವ ಕಾಲ ಬಂದಿದ್ದು, ಮೇ13 ರಂದು ಇದಕ್ಕೆ ಉತ್ತರ ಸಿಗಲಿದೆ ಎಂದು ಸುರೇಶ್ ಹೇಳಿದರು.
ಎಲ್ಲರೂ ಡಿ.ಕೆ.ಶಿವಕುಮಾರ್ ಅವರಿಗೆ ಮತ ಹಾಕಬೇಕು ಮತ್ತು ಹಾಕಿಸಬೇಕು. ಈ ಮೂಲಕ ರಾಜ್ಯದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಅಭಿವೃದ್ಧಿ ಜತೆಗೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…