BREAKING NEWS

ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮ ಕಾಯಿಲೆಯಷ್ಟೇ ಕೆಟ್ಟದು ಎಂದರು. ಈ ಮೂಲಕ ಉದಯ್ ಸ್ಟಾಲಿನ್ ಅವರ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.

ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಉದಯನಿಧಿ ವಿರುದ್ಧ ತಿರುಗಿಬಿದಿದ್ದರೆ, ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ.

ಇದೇ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂಡಿಯಾ ಮೈತ್ರಿಕೂಟದಿಂದ ಗಮನ ಬೇರೆಡೆ ಸೆಳೆಯುವ ತಂತ್ರವಾಗಿದೆ. ಬಿಜೆಪಿಯವರು ಭಯಗೊಂಡಿದ್ದಾರೆ. ಕೋವಿಡ್ ಸಾಂಕ್ರಾಮಿಕ, ಮಣಿಪುರ ಅಥವಾ ಚೈನಾ ಒಳನುಸುಳಿದಾಗ ವಿಶೇಷ ಸಂಸತ್ ಅಧಿವೇಶನವನ್ನು ಅವರು ಕರೆಯಲಿಲ್ಲ. ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಐದು ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಲೋಕಸಭಾ ಸಂಶೋಧನಾ ವಿಭಾಗವು ಸೂಚಿಸಿದ ಸಾಧಕ-ಬಾಧಕಗಳನ್ನು ನೋಡುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವುದಾಗಿ ತಿಳಿಸಿದರು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

10 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

11 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago