ಬೆಂಗಳೂರು : ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮ ಕಾಯಿಲೆಯಷ್ಟೇ ಕೆಟ್ಟದು ಎಂದರು. ಈ ಮೂಲಕ ಉದಯ್ ಸ್ಟಾಲಿನ್ ಅವರ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.
ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಉದಯನಿಧಿ ವಿರುದ್ಧ ತಿರುಗಿಬಿದಿದ್ದರೆ, ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ.
ಇದೇ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂಡಿಯಾ ಮೈತ್ರಿಕೂಟದಿಂದ ಗಮನ ಬೇರೆಡೆ ಸೆಳೆಯುವ ತಂತ್ರವಾಗಿದೆ. ಬಿಜೆಪಿಯವರು ಭಯಗೊಂಡಿದ್ದಾರೆ. ಕೋವಿಡ್ ಸಾಂಕ್ರಾಮಿಕ, ಮಣಿಪುರ ಅಥವಾ ಚೈನಾ ಒಳನುಸುಳಿದಾಗ ವಿಶೇಷ ಸಂಸತ್ ಅಧಿವೇಶನವನ್ನು ಅವರು ಕರೆಯಲಿಲ್ಲ. ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಐದು ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಲೋಕಸಭಾ ಸಂಶೋಧನಾ ವಿಭಾಗವು ಸೂಚಿಸಿದ ಸಾಧಕ-ಬಾಧಕಗಳನ್ನು ನೋಡುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವುದಾಗಿ ತಿಳಿಸಿದರು.
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…