ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ವಹಿಸಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.
ಗುರುವಾರ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜೊತೆ ಡಿಜಿ ಅಲೋಕ್ ಮೋಹನ್ ಸಭೆ ನಡೆಸಿದರು.
ಸಾಮಾಜಿಕ ಜಾಲತಾಣಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ಇಡಬೇಕು. ನಕಲಿ ಅಕೌಂಟ್ ಗಳನ್ನ ತೆರೆದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆಸಲಾಗುತ್ತಿದೆ. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ತಮ್ಮ ವ್ಯಾಪ್ತಿಗೆ ವಿವಿಐಪಿಗಳ ಭೇಟಿ ಹೊರತುಪಡಿಸಿ ಎಲ್ಲ ದಿನಗಳಲ್ಲೂ ಠಾಣೆಗೆ ಭೇಟಿ ನೀಡಬೇಕು. ಠಾಣೆಯಲ್ಲಿ ಕರ್ತವ್ಯ ನಿರ್ವಹಣೆಯನ್ನು ಖುದ್ದು ಪರಿಶೀಲಿಸಬೇಕು. ನಂತರ ಇದರ ಬಗ್ಗೆ ತಮ್ಮ ಕಚೇರಿಗೆ ವರದಿ ಸಲ್ಲಿಸುವಂತೆ ಹೇಳಿದರು.
ಎಲ್ಲ ವಿಭಾಗದ ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಹಾಗೂ ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…