ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ವಹಿಸಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.
ಗುರುವಾರ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜೊತೆ ಡಿಜಿ ಅಲೋಕ್ ಮೋಹನ್ ಸಭೆ ನಡೆಸಿದರು.
ಸಾಮಾಜಿಕ ಜಾಲತಾಣಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ಇಡಬೇಕು. ನಕಲಿ ಅಕೌಂಟ್ ಗಳನ್ನ ತೆರೆದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆಸಲಾಗುತ್ತಿದೆ. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ತಮ್ಮ ವ್ಯಾಪ್ತಿಗೆ ವಿವಿಐಪಿಗಳ ಭೇಟಿ ಹೊರತುಪಡಿಸಿ ಎಲ್ಲ ದಿನಗಳಲ್ಲೂ ಠಾಣೆಗೆ ಭೇಟಿ ನೀಡಬೇಕು. ಠಾಣೆಯಲ್ಲಿ ಕರ್ತವ್ಯ ನಿರ್ವಹಣೆಯನ್ನು ಖುದ್ದು ಪರಿಶೀಲಿಸಬೇಕು. ನಂತರ ಇದರ ಬಗ್ಗೆ ತಮ್ಮ ಕಚೇರಿಗೆ ವರದಿ ಸಲ್ಲಿಸುವಂತೆ ಹೇಳಿದರು.
ಎಲ್ಲ ವಿಭಾಗದ ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಹಾಗೂ ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…