ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ವಹಿಸಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.
ಗುರುವಾರ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜೊತೆ ಡಿಜಿ ಅಲೋಕ್ ಮೋಹನ್ ಸಭೆ ನಡೆಸಿದರು.
ಸಾಮಾಜಿಕ ಜಾಲತಾಣಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ಇಡಬೇಕು. ನಕಲಿ ಅಕೌಂಟ್ ಗಳನ್ನ ತೆರೆದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆಸಲಾಗುತ್ತಿದೆ. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ತಮ್ಮ ವ್ಯಾಪ್ತಿಗೆ ವಿವಿಐಪಿಗಳ ಭೇಟಿ ಹೊರತುಪಡಿಸಿ ಎಲ್ಲ ದಿನಗಳಲ್ಲೂ ಠಾಣೆಗೆ ಭೇಟಿ ನೀಡಬೇಕು. ಠಾಣೆಯಲ್ಲಿ ಕರ್ತವ್ಯ ನಿರ್ವಹಣೆಯನ್ನು ಖುದ್ದು ಪರಿಶೀಲಿಸಬೇಕು. ನಂತರ ಇದರ ಬಗ್ಗೆ ತಮ್ಮ ಕಚೇರಿಗೆ ವರದಿ ಸಲ್ಲಿಸುವಂತೆ ಹೇಳಿದರು.
ಎಲ್ಲ ವಿಭಾಗದ ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಹಾಗೂ ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…