BREAKING NEWS

ನೀರವ್ ಮೋದಿ, ಲಲಿತ್ ಮೋದಿ ಕಳ್ಳರಲ್ಲವೇ?: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ

ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ಪಕ್ಷಗಳ ನಾಯಕರು ಕೇಳುತ್ತಿರುವ ಪ್ರಶ್ನೆ ಇದು.

ಲೋಕಸಭೆ ಸದಸ್ಯತ್ವದಿಂದ ರಾಹುಲ್‌ ಗಾಂಧಿ ಅವರನ್ನು ಅಮಾನತು ಮಾಡಿದ ಆದೇಶ ಹೊರಬಿದ್ದ ಕೂಡಲೇ, ವಿವಿಧ ವಿರೋಧ ಪಕ್ಷಗಳ ನಾಯಕರು ಈ ಕ್ರಮವನ್ನು ಖಂಡಿಸಿ ಟ್ವೀಟ್‌ ಮಾಡಿದ್ದಾರೆ. ಜತೆಗೆ, ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಲಲಿತ್ ಮೋದಿ ಮತ್ತು ನೀರವ್ ಮೋದಿ ಹೆಸರನ್ನು ಬಳಸಿ ಟ್ವೀಟ್‌ ಮತ್ತು ಪೋಸ್ಟ್‌ ಮಾಡುತ್ತಿದ್ದಾರೆ. ಎರಡೂ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ನಲ್ಲಿವೆ.

ನೀರವ್ ಮೋದಿ ಕಳ್ಳನಲ್ಲವೇ? ಲಲಿತ್ ಮೋದಿ ಕಳ್ಳನಲ್ಲವೇ? ಇವರನ್ನು ರಕ್ಷಿಸಲು ಬಿಜೆಪಿ ಮುಂದಾಗುತ್ತಿರುವುದೇಕೆ? ಕಳ್ಳರನ್ನು ಕಳ್ಳರು ಎಂದು ಕರೆಯಲು ಇವರ ಆಕ್ಷೇಪವೇಕೆ? ಅದಾನಿ ವಿಚಾರದಿಂದ ಗಮನ ಬೇರೆಡೆಗೆ ಸೆಳೆಯಲೆಂದೇ ಇದನ್ನೆಲ್ಲಾ ಮಾಡಲಾಗುತ್ತಿದೆ. ಆದರೆ ಅದು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾತೆ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ರಾಹುಲ್‌ ಎಲ್ಲ ಮೋದಿಗಳೂ ಕಳ್ಳರು ಎಂದಿರಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಟ್ವೀಟ್‌ ಮಾಡಿದ್ದಾರೆ. ‘ರಾಹುಲ್ ಗಾಂಧಿ ಅವರು ನೀರವ್ ಮೋದಿ, ಲಲಿತ್ ಮೋದಿ, ಮೆಹುಲ್ ಚೋಕ್ಸಿಯನ್ನು ಕಳ್ಳರು ಎಂದಿದ್ದರು. ರಾಹುಲ್‌, ‘ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮ ಏಕೆ ಇದೆ’ ಎಂದು ಕೇಳಿದ್ದರು. ‘ಎಲ್ಲಾ ಮೋದಿಗಳೂ ಕಳ್ಳರು’ ಎಂದಿರಲಿಲ್ಲ. ಆದರೂ ಯಾವುದೋ ಮೋದಿಯ ಮಾನಕ್ಕೆ ಹಾನಿಯಾಗಿದೆ ಎಂದು ರಾಹುಲ್ ವಿರುದ್ಧ ದೂರು ನೀಡಲಾಗಿದೆ ಮತ್ತು ಎರಡು ವರ್ಷ ಜೈಲುಶಿಕ್ಷೆ ನೀಡಲಾಗಿದೆ. ಅವರ ಸಂಸದನ ಸ್ಥಾನವನ್ನೂ ತೆರವು ಮಾಡಲಾಗಿದೆ. ಇದು ಭಾರತದ ಪ್ರಜಾಪ್ರಭುತ್ವದ ಇಂದಿನ ಸ್ಥಿತಿ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಮೋದಿ ಸರ್ಕಾರದ ಆತ್ಮೀಯ ಮೋದಿ ಸೋದರರಾದ ನೀರವ್ ಮೋದಿ–ಲಲಿತ್ ಮೋದಿ, ವಿಜಯ್‌ ಮಲ್ಯ, ಮೆಹುಲ್ ಚೋಕ್ಸಿ ದೇಶದ ಬಡಜನರ ಹಣ ದೋಚಿ ವಿದೇಶಕ್ಕೆ ಓಡಿಹೋಗಿದ್ದಾರೆ. ತನಿಖಾ ಸಂಸ್ಥೆಗಳಿಗೆ ಈ ಜನರು ಕಾಣುವುದಿಲ್ಲ. ಸರ್ಕಾರವನ್ನು ಪ್ರಶ್ನಿಸುವವರಷ್ಟೇ ಈ ಸಂಸ್ಥೆಗಳಿಗೆ ಕಾಣುತ್ತಾರೆ’ ಎಂದು ಆರ್‌ಜೆಡಿ ಟ್ವೀಟ್‌ ಮಾಡಿದೆ.

andolanait

Recent Posts

ಎಚ್.ಡಿ.ಕೋಟೆ| ಸ್ಟೇಷನರಿ ಅಂಗಡಿಯಲ್ಲಿ ಬೆಂಕಿ: 15 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಎಚ್.ಡಿ.ಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…

39 mins ago

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

5 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

5 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

5 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

5 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 hours ago