BREAKING NEWS

ನೀರವ್ ಮೋದಿ, ಲಲಿತ್ ಮೋದಿ ಕಳ್ಳರಲ್ಲವೇ?: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ

ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ಪಕ್ಷಗಳ ನಾಯಕರು ಕೇಳುತ್ತಿರುವ ಪ್ರಶ್ನೆ ಇದು.

ಲೋಕಸಭೆ ಸದಸ್ಯತ್ವದಿಂದ ರಾಹುಲ್‌ ಗಾಂಧಿ ಅವರನ್ನು ಅಮಾನತು ಮಾಡಿದ ಆದೇಶ ಹೊರಬಿದ್ದ ಕೂಡಲೇ, ವಿವಿಧ ವಿರೋಧ ಪಕ್ಷಗಳ ನಾಯಕರು ಈ ಕ್ರಮವನ್ನು ಖಂಡಿಸಿ ಟ್ವೀಟ್‌ ಮಾಡಿದ್ದಾರೆ. ಜತೆಗೆ, ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಲಲಿತ್ ಮೋದಿ ಮತ್ತು ನೀರವ್ ಮೋದಿ ಹೆಸರನ್ನು ಬಳಸಿ ಟ್ವೀಟ್‌ ಮತ್ತು ಪೋಸ್ಟ್‌ ಮಾಡುತ್ತಿದ್ದಾರೆ. ಎರಡೂ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ನಲ್ಲಿವೆ.

ನೀರವ್ ಮೋದಿ ಕಳ್ಳನಲ್ಲವೇ? ಲಲಿತ್ ಮೋದಿ ಕಳ್ಳನಲ್ಲವೇ? ಇವರನ್ನು ರಕ್ಷಿಸಲು ಬಿಜೆಪಿ ಮುಂದಾಗುತ್ತಿರುವುದೇಕೆ? ಕಳ್ಳರನ್ನು ಕಳ್ಳರು ಎಂದು ಕರೆಯಲು ಇವರ ಆಕ್ಷೇಪವೇಕೆ? ಅದಾನಿ ವಿಚಾರದಿಂದ ಗಮನ ಬೇರೆಡೆಗೆ ಸೆಳೆಯಲೆಂದೇ ಇದನ್ನೆಲ್ಲಾ ಮಾಡಲಾಗುತ್ತಿದೆ. ಆದರೆ ಅದು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾತೆ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ರಾಹುಲ್‌ ಎಲ್ಲ ಮೋದಿಗಳೂ ಕಳ್ಳರು ಎಂದಿರಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಟ್ವೀಟ್‌ ಮಾಡಿದ್ದಾರೆ. ‘ರಾಹುಲ್ ಗಾಂಧಿ ಅವರು ನೀರವ್ ಮೋದಿ, ಲಲಿತ್ ಮೋದಿ, ಮೆಹುಲ್ ಚೋಕ್ಸಿಯನ್ನು ಕಳ್ಳರು ಎಂದಿದ್ದರು. ರಾಹುಲ್‌, ‘ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮ ಏಕೆ ಇದೆ’ ಎಂದು ಕೇಳಿದ್ದರು. ‘ಎಲ್ಲಾ ಮೋದಿಗಳೂ ಕಳ್ಳರು’ ಎಂದಿರಲಿಲ್ಲ. ಆದರೂ ಯಾವುದೋ ಮೋದಿಯ ಮಾನಕ್ಕೆ ಹಾನಿಯಾಗಿದೆ ಎಂದು ರಾಹುಲ್ ವಿರುದ್ಧ ದೂರು ನೀಡಲಾಗಿದೆ ಮತ್ತು ಎರಡು ವರ್ಷ ಜೈಲುಶಿಕ್ಷೆ ನೀಡಲಾಗಿದೆ. ಅವರ ಸಂಸದನ ಸ್ಥಾನವನ್ನೂ ತೆರವು ಮಾಡಲಾಗಿದೆ. ಇದು ಭಾರತದ ಪ್ರಜಾಪ್ರಭುತ್ವದ ಇಂದಿನ ಸ್ಥಿತಿ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಮೋದಿ ಸರ್ಕಾರದ ಆತ್ಮೀಯ ಮೋದಿ ಸೋದರರಾದ ನೀರವ್ ಮೋದಿ–ಲಲಿತ್ ಮೋದಿ, ವಿಜಯ್‌ ಮಲ್ಯ, ಮೆಹುಲ್ ಚೋಕ್ಸಿ ದೇಶದ ಬಡಜನರ ಹಣ ದೋಚಿ ವಿದೇಶಕ್ಕೆ ಓಡಿಹೋಗಿದ್ದಾರೆ. ತನಿಖಾ ಸಂಸ್ಥೆಗಳಿಗೆ ಈ ಜನರು ಕಾಣುವುದಿಲ್ಲ. ಸರ್ಕಾರವನ್ನು ಪ್ರಶ್ನಿಸುವವರಷ್ಟೇ ಈ ಸಂಸ್ಥೆಗಳಿಗೆ ಕಾಣುತ್ತಾರೆ’ ಎಂದು ಆರ್‌ಜೆಡಿ ಟ್ವೀಟ್‌ ಮಾಡಿದೆ.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

11 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

14 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

15 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

16 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

17 hours ago