BREAKING NEWS

ನೀರವ್ ಮೋದಿ, ಲಲಿತ್ ಮೋದಿ ಕಳ್ಳರಲ್ಲವೇ?: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ

ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ಪಕ್ಷಗಳ ನಾಯಕರು ಕೇಳುತ್ತಿರುವ ಪ್ರಶ್ನೆ ಇದು.

ಲೋಕಸಭೆ ಸದಸ್ಯತ್ವದಿಂದ ರಾಹುಲ್‌ ಗಾಂಧಿ ಅವರನ್ನು ಅಮಾನತು ಮಾಡಿದ ಆದೇಶ ಹೊರಬಿದ್ದ ಕೂಡಲೇ, ವಿವಿಧ ವಿರೋಧ ಪಕ್ಷಗಳ ನಾಯಕರು ಈ ಕ್ರಮವನ್ನು ಖಂಡಿಸಿ ಟ್ವೀಟ್‌ ಮಾಡಿದ್ದಾರೆ. ಜತೆಗೆ, ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಲಲಿತ್ ಮೋದಿ ಮತ್ತು ನೀರವ್ ಮೋದಿ ಹೆಸರನ್ನು ಬಳಸಿ ಟ್ವೀಟ್‌ ಮತ್ತು ಪೋಸ್ಟ್‌ ಮಾಡುತ್ತಿದ್ದಾರೆ. ಎರಡೂ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ನಲ್ಲಿವೆ.

ನೀರವ್ ಮೋದಿ ಕಳ್ಳನಲ್ಲವೇ? ಲಲಿತ್ ಮೋದಿ ಕಳ್ಳನಲ್ಲವೇ? ಇವರನ್ನು ರಕ್ಷಿಸಲು ಬಿಜೆಪಿ ಮುಂದಾಗುತ್ತಿರುವುದೇಕೆ? ಕಳ್ಳರನ್ನು ಕಳ್ಳರು ಎಂದು ಕರೆಯಲು ಇವರ ಆಕ್ಷೇಪವೇಕೆ? ಅದಾನಿ ವಿಚಾರದಿಂದ ಗಮನ ಬೇರೆಡೆಗೆ ಸೆಳೆಯಲೆಂದೇ ಇದನ್ನೆಲ್ಲಾ ಮಾಡಲಾಗುತ್ತಿದೆ. ಆದರೆ ಅದು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾತೆ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ರಾಹುಲ್‌ ಎಲ್ಲ ಮೋದಿಗಳೂ ಕಳ್ಳರು ಎಂದಿರಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಟ್ವೀಟ್‌ ಮಾಡಿದ್ದಾರೆ. ‘ರಾಹುಲ್ ಗಾಂಧಿ ಅವರು ನೀರವ್ ಮೋದಿ, ಲಲಿತ್ ಮೋದಿ, ಮೆಹುಲ್ ಚೋಕ್ಸಿಯನ್ನು ಕಳ್ಳರು ಎಂದಿದ್ದರು. ರಾಹುಲ್‌, ‘ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮ ಏಕೆ ಇದೆ’ ಎಂದು ಕೇಳಿದ್ದರು. ‘ಎಲ್ಲಾ ಮೋದಿಗಳೂ ಕಳ್ಳರು’ ಎಂದಿರಲಿಲ್ಲ. ಆದರೂ ಯಾವುದೋ ಮೋದಿಯ ಮಾನಕ್ಕೆ ಹಾನಿಯಾಗಿದೆ ಎಂದು ರಾಹುಲ್ ವಿರುದ್ಧ ದೂರು ನೀಡಲಾಗಿದೆ ಮತ್ತು ಎರಡು ವರ್ಷ ಜೈಲುಶಿಕ್ಷೆ ನೀಡಲಾಗಿದೆ. ಅವರ ಸಂಸದನ ಸ್ಥಾನವನ್ನೂ ತೆರವು ಮಾಡಲಾಗಿದೆ. ಇದು ಭಾರತದ ಪ್ರಜಾಪ್ರಭುತ್ವದ ಇಂದಿನ ಸ್ಥಿತಿ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಮೋದಿ ಸರ್ಕಾರದ ಆತ್ಮೀಯ ಮೋದಿ ಸೋದರರಾದ ನೀರವ್ ಮೋದಿ–ಲಲಿತ್ ಮೋದಿ, ವಿಜಯ್‌ ಮಲ್ಯ, ಮೆಹುಲ್ ಚೋಕ್ಸಿ ದೇಶದ ಬಡಜನರ ಹಣ ದೋಚಿ ವಿದೇಶಕ್ಕೆ ಓಡಿಹೋಗಿದ್ದಾರೆ. ತನಿಖಾ ಸಂಸ್ಥೆಗಳಿಗೆ ಈ ಜನರು ಕಾಣುವುದಿಲ್ಲ. ಸರ್ಕಾರವನ್ನು ಪ್ರಶ್ನಿಸುವವರಷ್ಟೇ ಈ ಸಂಸ್ಥೆಗಳಿಗೆ ಕಾಣುತ್ತಾರೆ’ ಎಂದು ಆರ್‌ಜೆಡಿ ಟ್ವೀಟ್‌ ಮಾಡಿದೆ.

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

21 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago