BREAKING NEWS

ಮನೆಯಲ್ಲೇ ಗಾಂಜಾ ಬೆಳೆದಿದ್ದ 3 ವೈದ್ಯಕೀಯ ವಿದ್ಯಾರ್ಥಿಗಳ ಬಂಧನ

ಶಿವಮೊಗ್ಗ : ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಮನೆಯಲ್ಲೆ ಹೈಟೆಕ್ ಫಾರ್ಮಿಂಗ್ ಮೂಲಕ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರೆನ್ನಲಾಗಿದೆ.

ಮನೆ ಮಾಲೀಕರ ಗಮನಕ್ಕೆ ಬಾರದಂತೆ ಮನೆಯೊಳಗೆ ಕೃತಕ ವಾತಾವರಣ ಸೃಷ್ಟಿಸಿ (ಸ್ಪೈಡರ್ ಫಾರ್ಮಿಂಗ್) ಪಾಟ್ಗಳಲ್ಲಿ ಗಾಂಜಾ ಬೆಳೆದು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೂರುವರೆ ವರ್ಷದಿಂದ ಈ ದಂಧೆಯಲ್ಲಿ ತೊಡಗಿಕೊಂಡಿದ್ದಾರೆನ್ನಲಾಗಿದ್ದು, ಇದರಲ್ಲಿ ಇನ್ನು ಭಾಗಿಯಾಗಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಆರೋಪಿಗಳಿಂದ 227 ಗ್ರಾಂ ಗಾಂಜಾ, 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜಗಳಿದ್ದ ಚಿಕ್ಕ ಬಾಟಲ್, 3 ಕೆನಾಬಿಲ್ ಆಯಿಲ್ ಸಿರಂಜ್, ಗಾಂಜಾಪುಡಿ ಮಾಡಲು ಬಳಸುತ್ತಿದ್ದ ಎರಡು ಡಬ್ಬಿಗಳು, 1 ಇಲೆಕ್ಟ್ರಾನಿಕ್ ತೂಕದ ಯಂತ್ರ, 1 ಎಕ್ಸಿಟ್ ಫ್ಯಾನ್, 6 ಟೇಬಲ್ ಫ್ಯಾನ್, 2 ಸ್ಟೆಬಲೈಸರ್, 3 ಎಲ್ಇಡಿ ಲೈಟ್, ರೋಲಿಂಗ್ ಪೇಪರ್, 2 ಹುಕ್ಕಾ ಕೊಳವೆ, 4 ಹುಕ್ಕಾ ಕ್ಯಾಪ್, ಗಾಂಜಾ ಗಿಡದ ಕಾಂಡ, 19 ಸಾವಿರ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

lokesh

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago