ಶಿವಮೊಗ್ಗ : ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಮನೆಯಲ್ಲೆ ಹೈಟೆಕ್ ಫಾರ್ಮಿಂಗ್ ಮೂಲಕ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರೆನ್ನಲಾಗಿದೆ.
ಮನೆ ಮಾಲೀಕರ ಗಮನಕ್ಕೆ ಬಾರದಂತೆ ಮನೆಯೊಳಗೆ ಕೃತಕ ವಾತಾವರಣ ಸೃಷ್ಟಿಸಿ (ಸ್ಪೈಡರ್ ಫಾರ್ಮಿಂಗ್) ಪಾಟ್ಗಳಲ್ಲಿ ಗಾಂಜಾ ಬೆಳೆದು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೂರುವರೆ ವರ್ಷದಿಂದ ಈ ದಂಧೆಯಲ್ಲಿ ತೊಡಗಿಕೊಂಡಿದ್ದಾರೆನ್ನಲಾಗಿದ್ದು, ಇದರಲ್ಲಿ ಇನ್ನು ಭಾಗಿಯಾಗಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳಿಂದ 227 ಗ್ರಾಂ ಗಾಂಜಾ, 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜಗಳಿದ್ದ ಚಿಕ್ಕ ಬಾಟಲ್, 3 ಕೆನಾಬಿಲ್ ಆಯಿಲ್ ಸಿರಂಜ್, ಗಾಂಜಾಪುಡಿ ಮಾಡಲು ಬಳಸುತ್ತಿದ್ದ ಎರಡು ಡಬ್ಬಿಗಳು, 1 ಇಲೆಕ್ಟ್ರಾನಿಕ್ ತೂಕದ ಯಂತ್ರ, 1 ಎಕ್ಸಿಟ್ ಫ್ಯಾನ್, 6 ಟೇಬಲ್ ಫ್ಯಾನ್, 2 ಸ್ಟೆಬಲೈಸರ್, 3 ಎಲ್ಇಡಿ ಲೈಟ್, ರೋಲಿಂಗ್ ಪೇಪರ್, 2 ಹುಕ್ಕಾ ಕೊಳವೆ, 4 ಹುಕ್ಕಾ ಕ್ಯಾಪ್, ಗಾಂಜಾ ಗಿಡದ ಕಾಂಡ, 19 ಸಾವಿರ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…