BREAKING NEWS

ವರ್ತೂರು ಪ್ರಕಾಶ್ ಗೆ ಬಂಧನ ಭೀತಿ : ನಾಯಾಲಯದಿಂದ ಅರೆಸ್ಟ್ ವಾರಂಟ್

ಕೋಲಾರ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ ಜೆಎಫ್ ಎಫ್ ಸಿ ನ್ಯಾಯಾಲಯ, ವರ್ತೂರು ಅವರನ್ನು ಮೇ 10ರೊಳಗೆ ಬಂಧಿಸುವಂತೆ ಆದೇಶಿಸಿದೆ.

14 ವರ್ಷಗಳ ಹಿಂದೆ ವರ್ತೂರು ಪ್ರಕಾಶ್ ಅವರು, ಲೀಲಾವತಿ ಎಂಬುವರಿಗೆ ಚೆಕ್ ನೀಡಿದ್ದ ಪ್ರಕರಣವಿದು. ಹಣದ ವ್ಯವಹಾರವೊಂದಕ್ಕೆ ಸಂಬಂಧಪಟ್ಟಂತೆ, 2008ರಲ್ಲಿ ಲೀಲಾವತಿ ಎಂಬುವರಿಗೆ 25 ಲಕ್ಷ ರೂ.ಗಳ ಚೆಕ್ ಅನ್ನು ವರ್ತೂರು ಪ್ರಕಾಶ್ ನೀಡಿದ್ದರು. ಲೀಲಾವತಿಯವರು ಚೆಕ್ ಮೂಲಕ ನಗದು ಡ್ರಾ ಮಾಡಲು ಹೋದಾಗ ಅದು ಬೌನ್ಸ್ ಆಗಿತ್ತು. ಆಗ ಅವರು, ಆನೇಕಲ್ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವರ್ತೂರು ವಿರುದ್ಧ ಪ್ರಕರಣ ದಾಖಲಿಸಿದ್ದರು.

ಲೀಲಾವತಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವರ್ತೂರು ಪ್ರಕಾಶ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಹಲವಾರು ಬಾರಿ ಸಮನ್ಸ್ ಜಾರಿಗೊಳಿಸಿದರೂ ವರ್ತೂರು ಪ್ರಕಾಶ್ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಆ ಹಿನ್ನೆಲೆಯಲ್ಲಿ ಮೇ 5ರಂದು ಬಂಧನ ವಾರಂಟ್ ಜಾರಿಗೊಳಿಸಿರುವ ಜೆಎಂಎಫ್ ಸಿ ನ್ಯಾಯಾಲಯ ಮೇ 10ರೊಳಗೆ ಪ್ರಕಾಶ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಆದೇಶಿಸಿದೆ.

2018ರಲ್ಲೂ ಬಂಧನ ಭೀತಿ : 2018ರಲ್ಲಿಯೂ ವರ್ತೂರು ಪ್ರಕಾಶ್ ಅವರಿಗೆ ಬಂಧನ ಭೀತಿ ಎದುರಾಗಿತ್ತು. ಕೋಲಾರ ವ್ಯಾಪ್ತಿಯ ಚಿನ್ನೇನಹಳ್ಳಿಯ ನಿವಾಸಿ ಚೆನ್ನಮ್ಮ ಎಂಬುವರಿಗೆ ಸೇರಿದ 1 ಎಕರೆ 30 ಗುಂಟೆ ಜಮೀನನ್ನು ವರ್ತೂರು ಅವರು ಖರೀದಿಸಲು ಮುಂದಾಗಿದ್ದರು. ಆ ಜಮೀನು ಖರೀದಿಸಿ, ತಮ್ಮ ಅಣ್ಣನ ಮಗ ರಕ್ಷಿತ್ ಹೆಸರಿಗೆ ಅವರು ವರ್ಗಾಯಿಸಿದ್ದರು. ಆದರೆ, ಚನ್ನಮ್ಮ ಅವರಿಗೆ ಹಣ ನೀಡಿರಲಿಲ್ಲ ಎಂಬ ಆರೋಪ ವರ್ತೂರು ವಿರುದ್ಧ ಕೇಳಿಬಂದಿತ್ತು.

ಚನ್ನಮ್ಮ ಅವರು ಮೊದಲು ಕೋಲಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆನಂತರ, ಈ ಪ್ರಕರಣ ಸ್ಥಳೀಯ ನ್ಯಾಯಾಲಯದ ಮೆಟ್ಟಿಲೇರಿತ್ತು. ವರ್ತೂರು ಪ್ರಕಾಶ್ ಅವರನ್ನು ಈ ಪ್ರಕರಣದ 4ನೇ ಆರೋಪಿ ಎಂದು ಪರಿಗಣಿಸಲಾಗಿತ್ತು. ಈ ಪ್ರಕರಣದಲ್ಲಿ ವರ್ತೂರು ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿ ವಜಾಗೊಂಡಿತ್ತು. ಆಗ, ವರ್ತೂರು ಅವರಿಗೆ ಬಂಧನ ಭೀತಿ ಎದುರಾಗಿತ್ತು.

lokesh

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

14 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

38 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

58 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago