BREAKING NEWS

ವರ್ತೂರು ಪ್ರಕಾಶ್ ಗೆ ಬಂಧನ ಭೀತಿ : ನಾಯಾಲಯದಿಂದ ಅರೆಸ್ಟ್ ವಾರಂಟ್

ಕೋಲಾರ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ ಜೆಎಫ್ ಎಫ್ ಸಿ ನ್ಯಾಯಾಲಯ, ವರ್ತೂರು ಅವರನ್ನು ಮೇ 10ರೊಳಗೆ ಬಂಧಿಸುವಂತೆ ಆದೇಶಿಸಿದೆ.

14 ವರ್ಷಗಳ ಹಿಂದೆ ವರ್ತೂರು ಪ್ರಕಾಶ್ ಅವರು, ಲೀಲಾವತಿ ಎಂಬುವರಿಗೆ ಚೆಕ್ ನೀಡಿದ್ದ ಪ್ರಕರಣವಿದು. ಹಣದ ವ್ಯವಹಾರವೊಂದಕ್ಕೆ ಸಂಬಂಧಪಟ್ಟಂತೆ, 2008ರಲ್ಲಿ ಲೀಲಾವತಿ ಎಂಬುವರಿಗೆ 25 ಲಕ್ಷ ರೂ.ಗಳ ಚೆಕ್ ಅನ್ನು ವರ್ತೂರು ಪ್ರಕಾಶ್ ನೀಡಿದ್ದರು. ಲೀಲಾವತಿಯವರು ಚೆಕ್ ಮೂಲಕ ನಗದು ಡ್ರಾ ಮಾಡಲು ಹೋದಾಗ ಅದು ಬೌನ್ಸ್ ಆಗಿತ್ತು. ಆಗ ಅವರು, ಆನೇಕಲ್ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವರ್ತೂರು ವಿರುದ್ಧ ಪ್ರಕರಣ ದಾಖಲಿಸಿದ್ದರು.

ಲೀಲಾವತಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವರ್ತೂರು ಪ್ರಕಾಶ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಹಲವಾರು ಬಾರಿ ಸಮನ್ಸ್ ಜಾರಿಗೊಳಿಸಿದರೂ ವರ್ತೂರು ಪ್ರಕಾಶ್ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಆ ಹಿನ್ನೆಲೆಯಲ್ಲಿ ಮೇ 5ರಂದು ಬಂಧನ ವಾರಂಟ್ ಜಾರಿಗೊಳಿಸಿರುವ ಜೆಎಂಎಫ್ ಸಿ ನ್ಯಾಯಾಲಯ ಮೇ 10ರೊಳಗೆ ಪ್ರಕಾಶ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಆದೇಶಿಸಿದೆ.

2018ರಲ್ಲೂ ಬಂಧನ ಭೀತಿ : 2018ರಲ್ಲಿಯೂ ವರ್ತೂರು ಪ್ರಕಾಶ್ ಅವರಿಗೆ ಬಂಧನ ಭೀತಿ ಎದುರಾಗಿತ್ತು. ಕೋಲಾರ ವ್ಯಾಪ್ತಿಯ ಚಿನ್ನೇನಹಳ್ಳಿಯ ನಿವಾಸಿ ಚೆನ್ನಮ್ಮ ಎಂಬುವರಿಗೆ ಸೇರಿದ 1 ಎಕರೆ 30 ಗುಂಟೆ ಜಮೀನನ್ನು ವರ್ತೂರು ಅವರು ಖರೀದಿಸಲು ಮುಂದಾಗಿದ್ದರು. ಆ ಜಮೀನು ಖರೀದಿಸಿ, ತಮ್ಮ ಅಣ್ಣನ ಮಗ ರಕ್ಷಿತ್ ಹೆಸರಿಗೆ ಅವರು ವರ್ಗಾಯಿಸಿದ್ದರು. ಆದರೆ, ಚನ್ನಮ್ಮ ಅವರಿಗೆ ಹಣ ನೀಡಿರಲಿಲ್ಲ ಎಂಬ ಆರೋಪ ವರ್ತೂರು ವಿರುದ್ಧ ಕೇಳಿಬಂದಿತ್ತು.

ಚನ್ನಮ್ಮ ಅವರು ಮೊದಲು ಕೋಲಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆನಂತರ, ಈ ಪ್ರಕರಣ ಸ್ಥಳೀಯ ನ್ಯಾಯಾಲಯದ ಮೆಟ್ಟಿಲೇರಿತ್ತು. ವರ್ತೂರು ಪ್ರಕಾಶ್ ಅವರನ್ನು ಈ ಪ್ರಕರಣದ 4ನೇ ಆರೋಪಿ ಎಂದು ಪರಿಗಣಿಸಲಾಗಿತ್ತು. ಈ ಪ್ರಕರಣದಲ್ಲಿ ವರ್ತೂರು ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿ ವಜಾಗೊಂಡಿತ್ತು. ಆಗ, ವರ್ತೂರು ಅವರಿಗೆ ಬಂಧನ ಭೀತಿ ಎದುರಾಗಿತ್ತು.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

7 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

7 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

7 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago