BREAKING NEWS

ವರ್ತೂರು ಪ್ರಕಾಶ್ ಗೆ ಬಂಧನ ಭೀತಿ : ನಾಯಾಲಯದಿಂದ ಅರೆಸ್ಟ್ ವಾರಂಟ್

ಕೋಲಾರ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ ಜೆಎಫ್ ಎಫ್ ಸಿ ನ್ಯಾಯಾಲಯ, ವರ್ತೂರು ಅವರನ್ನು ಮೇ 10ರೊಳಗೆ ಬಂಧಿಸುವಂತೆ ಆದೇಶಿಸಿದೆ.

14 ವರ್ಷಗಳ ಹಿಂದೆ ವರ್ತೂರು ಪ್ರಕಾಶ್ ಅವರು, ಲೀಲಾವತಿ ಎಂಬುವರಿಗೆ ಚೆಕ್ ನೀಡಿದ್ದ ಪ್ರಕರಣವಿದು. ಹಣದ ವ್ಯವಹಾರವೊಂದಕ್ಕೆ ಸಂಬಂಧಪಟ್ಟಂತೆ, 2008ರಲ್ಲಿ ಲೀಲಾವತಿ ಎಂಬುವರಿಗೆ 25 ಲಕ್ಷ ರೂ.ಗಳ ಚೆಕ್ ಅನ್ನು ವರ್ತೂರು ಪ್ರಕಾಶ್ ನೀಡಿದ್ದರು. ಲೀಲಾವತಿಯವರು ಚೆಕ್ ಮೂಲಕ ನಗದು ಡ್ರಾ ಮಾಡಲು ಹೋದಾಗ ಅದು ಬೌನ್ಸ್ ಆಗಿತ್ತು. ಆಗ ಅವರು, ಆನೇಕಲ್ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವರ್ತೂರು ವಿರುದ್ಧ ಪ್ರಕರಣ ದಾಖಲಿಸಿದ್ದರು.

ಲೀಲಾವತಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವರ್ತೂರು ಪ್ರಕಾಶ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಹಲವಾರು ಬಾರಿ ಸಮನ್ಸ್ ಜಾರಿಗೊಳಿಸಿದರೂ ವರ್ತೂರು ಪ್ರಕಾಶ್ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಆ ಹಿನ್ನೆಲೆಯಲ್ಲಿ ಮೇ 5ರಂದು ಬಂಧನ ವಾರಂಟ್ ಜಾರಿಗೊಳಿಸಿರುವ ಜೆಎಂಎಫ್ ಸಿ ನ್ಯಾಯಾಲಯ ಮೇ 10ರೊಳಗೆ ಪ್ರಕಾಶ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಆದೇಶಿಸಿದೆ.

2018ರಲ್ಲೂ ಬಂಧನ ಭೀತಿ : 2018ರಲ್ಲಿಯೂ ವರ್ತೂರು ಪ್ರಕಾಶ್ ಅವರಿಗೆ ಬಂಧನ ಭೀತಿ ಎದುರಾಗಿತ್ತು. ಕೋಲಾರ ವ್ಯಾಪ್ತಿಯ ಚಿನ್ನೇನಹಳ್ಳಿಯ ನಿವಾಸಿ ಚೆನ್ನಮ್ಮ ಎಂಬುವರಿಗೆ ಸೇರಿದ 1 ಎಕರೆ 30 ಗುಂಟೆ ಜಮೀನನ್ನು ವರ್ತೂರು ಅವರು ಖರೀದಿಸಲು ಮುಂದಾಗಿದ್ದರು. ಆ ಜಮೀನು ಖರೀದಿಸಿ, ತಮ್ಮ ಅಣ್ಣನ ಮಗ ರಕ್ಷಿತ್ ಹೆಸರಿಗೆ ಅವರು ವರ್ಗಾಯಿಸಿದ್ದರು. ಆದರೆ, ಚನ್ನಮ್ಮ ಅವರಿಗೆ ಹಣ ನೀಡಿರಲಿಲ್ಲ ಎಂಬ ಆರೋಪ ವರ್ತೂರು ವಿರುದ್ಧ ಕೇಳಿಬಂದಿತ್ತು.

ಚನ್ನಮ್ಮ ಅವರು ಮೊದಲು ಕೋಲಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆನಂತರ, ಈ ಪ್ರಕರಣ ಸ್ಥಳೀಯ ನ್ಯಾಯಾಲಯದ ಮೆಟ್ಟಿಲೇರಿತ್ತು. ವರ್ತೂರು ಪ್ರಕಾಶ್ ಅವರನ್ನು ಈ ಪ್ರಕರಣದ 4ನೇ ಆರೋಪಿ ಎಂದು ಪರಿಗಣಿಸಲಾಗಿತ್ತು. ಈ ಪ್ರಕರಣದಲ್ಲಿ ವರ್ತೂರು ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿ ವಜಾಗೊಂಡಿತ್ತು. ಆಗ, ವರ್ತೂರು ಅವರಿಗೆ ಬಂಧನ ಭೀತಿ ಎದುರಾಗಿತ್ತು.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

25 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

3 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

13 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

17 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

18 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

18 hours ago