BREAKING NEWS

ವರ್ತೂರು ಪ್ರಕಾಶ್ ಗೆ ಬಂಧನ ಭೀತಿ : ನಾಯಾಲಯದಿಂದ ಅರೆಸ್ಟ್ ವಾರಂಟ್

ಕೋಲಾರ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ ಜೆಎಫ್ ಎಫ್ ಸಿ ನ್ಯಾಯಾಲಯ, ವರ್ತೂರು ಅವರನ್ನು ಮೇ 10ರೊಳಗೆ ಬಂಧಿಸುವಂತೆ ಆದೇಶಿಸಿದೆ.

14 ವರ್ಷಗಳ ಹಿಂದೆ ವರ್ತೂರು ಪ್ರಕಾಶ್ ಅವರು, ಲೀಲಾವತಿ ಎಂಬುವರಿಗೆ ಚೆಕ್ ನೀಡಿದ್ದ ಪ್ರಕರಣವಿದು. ಹಣದ ವ್ಯವಹಾರವೊಂದಕ್ಕೆ ಸಂಬಂಧಪಟ್ಟಂತೆ, 2008ರಲ್ಲಿ ಲೀಲಾವತಿ ಎಂಬುವರಿಗೆ 25 ಲಕ್ಷ ರೂ.ಗಳ ಚೆಕ್ ಅನ್ನು ವರ್ತೂರು ಪ್ರಕಾಶ್ ನೀಡಿದ್ದರು. ಲೀಲಾವತಿಯವರು ಚೆಕ್ ಮೂಲಕ ನಗದು ಡ್ರಾ ಮಾಡಲು ಹೋದಾಗ ಅದು ಬೌನ್ಸ್ ಆಗಿತ್ತು. ಆಗ ಅವರು, ಆನೇಕಲ್ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವರ್ತೂರು ವಿರುದ್ಧ ಪ್ರಕರಣ ದಾಖಲಿಸಿದ್ದರು.

ಲೀಲಾವತಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವರ್ತೂರು ಪ್ರಕಾಶ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಹಲವಾರು ಬಾರಿ ಸಮನ್ಸ್ ಜಾರಿಗೊಳಿಸಿದರೂ ವರ್ತೂರು ಪ್ರಕಾಶ್ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಆ ಹಿನ್ನೆಲೆಯಲ್ಲಿ ಮೇ 5ರಂದು ಬಂಧನ ವಾರಂಟ್ ಜಾರಿಗೊಳಿಸಿರುವ ಜೆಎಂಎಫ್ ಸಿ ನ್ಯಾಯಾಲಯ ಮೇ 10ರೊಳಗೆ ಪ್ರಕಾಶ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಆದೇಶಿಸಿದೆ.

2018ರಲ್ಲೂ ಬಂಧನ ಭೀತಿ : 2018ರಲ್ಲಿಯೂ ವರ್ತೂರು ಪ್ರಕಾಶ್ ಅವರಿಗೆ ಬಂಧನ ಭೀತಿ ಎದುರಾಗಿತ್ತು. ಕೋಲಾರ ವ್ಯಾಪ್ತಿಯ ಚಿನ್ನೇನಹಳ್ಳಿಯ ನಿವಾಸಿ ಚೆನ್ನಮ್ಮ ಎಂಬುವರಿಗೆ ಸೇರಿದ 1 ಎಕರೆ 30 ಗುಂಟೆ ಜಮೀನನ್ನು ವರ್ತೂರು ಅವರು ಖರೀದಿಸಲು ಮುಂದಾಗಿದ್ದರು. ಆ ಜಮೀನು ಖರೀದಿಸಿ, ತಮ್ಮ ಅಣ್ಣನ ಮಗ ರಕ್ಷಿತ್ ಹೆಸರಿಗೆ ಅವರು ವರ್ಗಾಯಿಸಿದ್ದರು. ಆದರೆ, ಚನ್ನಮ್ಮ ಅವರಿಗೆ ಹಣ ನೀಡಿರಲಿಲ್ಲ ಎಂಬ ಆರೋಪ ವರ್ತೂರು ವಿರುದ್ಧ ಕೇಳಿಬಂದಿತ್ತು.

ಚನ್ನಮ್ಮ ಅವರು ಮೊದಲು ಕೋಲಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆನಂತರ, ಈ ಪ್ರಕರಣ ಸ್ಥಳೀಯ ನ್ಯಾಯಾಲಯದ ಮೆಟ್ಟಿಲೇರಿತ್ತು. ವರ್ತೂರು ಪ್ರಕಾಶ್ ಅವರನ್ನು ಈ ಪ್ರಕರಣದ 4ನೇ ಆರೋಪಿ ಎಂದು ಪರಿಗಣಿಸಲಾಗಿತ್ತು. ಈ ಪ್ರಕರಣದಲ್ಲಿ ವರ್ತೂರು ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿ ವಜಾಗೊಂಡಿತ್ತು. ಆಗ, ವರ್ತೂರು ಅವರಿಗೆ ಬಂಧನ ಭೀತಿ ಎದುರಾಗಿತ್ತು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago