BREAKING NEWS

16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ಅರವಿಂದ್ ಪನಗರಿಯಾ ನೇಮಕ

ನವದೆಹಲಿ: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಫೈನಾನ್ಸ್ ಕಮಿಷನ್ ಮುಖ್ಯಸ್ಥ ಸ್ಥಾನಕ್ಕೆ ಪನಗರಿಯಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೊರಡಿಸಿದ್ದ ಆದೇಶವನ್ನು ಹಣಕಾಸು ಇಲಾಖೆ ಇಂದು (ಭಾನುವಾರ) ಅಧಿಸೂಚನೆ ಹೊರಡಿಸಿದೆ. ಭಾರತೀಯ ಅಮೆರಿಕನ್ ಆರ್ಥಿಕ ತಜ್ಞರಾಗಿರುವ ಅರವಿಂದ್ ಪನಗರಿಯಾ 2015ರ ಜನವರಿಯಿಂದ 2017ರ ಆಗಸ್ಟ್ ತಿಂಗಳವರೆಗೆ ನೀತಿ ಆಯೋಗ್​ನಲ್ಲಿ ಸೇವೆ ಸಲ್ಲಿಸಿದ್ದರು.ಮೂಲತಃ ಅರವಿಂದ್ ಪನಗರಿಯಾ ಅವರು ರಾಜಸ್ಥಾನದವರಾಗಿದ್ದು, ಸದ್ಯ ಅಮೆರಿಕದ ವಿವಿಯೊಂದರಲ್ಲಿ ಪೊಲಿಟಿಕಲ್, ಎಕನಾಮಿಕ್ಸ್ ಭೋದಕರಾಗಿದ್ದಾರೆ.

16ನೇ ಹಣಕಾಸು ಆಯೋಗದ ಕಾರ್ಯದರ್ಶಿ ಸ್ಥಾನಕ್ಕೆ ಋತ್ವಿಕ್ ರಂಜನಮ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಹಣಕಾಸು ಆಯೋಗದ ಇತರ ಸದಸ್ಯರ ಹೆಸರನ್ನು ಪ್ರತ್ಯೇಕವಾಗಿ ಘೋಷಿಸುವ ಸಾಧ್ಯತೆಯಿದೆ.

ಹಣಕಾಸು ಆಯೋಗದ ಜವಾಬ್ದಾರಿ ಏನು?

ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತೆರಿಗೆ ಆದಾಯದ ಹಂಚಿಕೆಗೆ ಸೂತ್ರ ರೂಪಿಸುವುದು ಹಣಕಾಸು ಆಯೋಗದ ಜವಾಬ್ದಾರಿ. ಐದು ವರ್ಷಕ್ಕೆಂದು ಆಯೋಗ ತೆರಿಗೆ ಹಂಚಿಕೆ ಸೂತ್ರಗಳನ್ನು ಶಿಫಾರಸು ಮಾಡುತ್ತದೆ. ಸರ್ಕಾರ ಈ ಶಿಫಾರಸುಗಳ ಆಧಾರದ ಮೇಲೆ ತೆರಿಗೆ ಹಂಚಿಕೆ ಮಾಡುತ್ತದೆ.

16ನೇ ಹಣಕಾಸು ಆಯೋಗ ಮಾಡುವ ಶಿಫಾರಸುಗಳು 2026ರ ಏಪ್ರಿಲ್​ನಿಂದ ಜಾರಿ ಆಗುತ್ತವೆ. ಈಗ ನೇಮಕ ಮಾಡಲಾಗಿರುವ ಈ ಆಯೋಗವು 2025ರ ಅಕ್ಟೋಬರ್ 31ರವರೆಗೆ ಮಾತ್ರ ಅಸ್ತಿತ್ವದಲ್ಲಿರುತ್ತದೆ. ಅಷ್ಟರೊಳಗೆ ಸರ್ಕಾರಕ್ಕೆ ತೆರಿಗೆ ಹಂಚಿಕೆಯ ಸೂತ್ರಗಳನ್ನು ಶಿಫಾರಸು ಮಾಡಬೇಕಾಗುತ್ತದೆ.

ಈಗ ಆಗುತ್ತಿರುವ ತೆರಿಗೆ ಹಂಚಿಕೆ ಸೂತ್ರವನ್ನು 15ನೇ ಹಣಕಾಸು ಆಯೋಗ ರೂಪಿಸಿತ್ತು. 2017ರ ನವೆಂಬರ್​ನಲ್ಲಿ ಈ ಆಯೋಗದ ರಚನೆಯಾಗಿತ್ತು. ಎನ್ ಕೆ ಸಿಂಗ್ ಮುಖ್ಯಸ್ಥರಾಗಿದ್ದರು. ಇದರ ವ್ಯಾಪ್ತಿಯನ್ನು ಐದು ವರ್ಷದ ಬದಲು ಆರು ವರ್ಷಕ್ಕೆ ಹೆಚ್ಚಿಸಲಾಗಿತ್ತು. 2025-26ರವರೆಗೆ ಇದರ ಶಿಫಾರಸುಗಳು ಜಾರಿಯಲ್ಲಿರುತ್ತವೆ.

andolanait

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

7 mins ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

18 mins ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

24 mins ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

28 mins ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

35 mins ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

39 mins ago