BREAKING NEWS

16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ಅರವಿಂದ್ ಪನಗರಿಯಾ ನೇಮಕ

ನವದೆಹಲಿ: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಫೈನಾನ್ಸ್ ಕಮಿಷನ್ ಮುಖ್ಯಸ್ಥ ಸ್ಥಾನಕ್ಕೆ ಪನಗರಿಯಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೊರಡಿಸಿದ್ದ ಆದೇಶವನ್ನು ಹಣಕಾಸು ಇಲಾಖೆ ಇಂದು (ಭಾನುವಾರ) ಅಧಿಸೂಚನೆ ಹೊರಡಿಸಿದೆ. ಭಾರತೀಯ ಅಮೆರಿಕನ್ ಆರ್ಥಿಕ ತಜ್ಞರಾಗಿರುವ ಅರವಿಂದ್ ಪನಗರಿಯಾ 2015ರ ಜನವರಿಯಿಂದ 2017ರ ಆಗಸ್ಟ್ ತಿಂಗಳವರೆಗೆ ನೀತಿ ಆಯೋಗ್​ನಲ್ಲಿ ಸೇವೆ ಸಲ್ಲಿಸಿದ್ದರು.ಮೂಲತಃ ಅರವಿಂದ್ ಪನಗರಿಯಾ ಅವರು ರಾಜಸ್ಥಾನದವರಾಗಿದ್ದು, ಸದ್ಯ ಅಮೆರಿಕದ ವಿವಿಯೊಂದರಲ್ಲಿ ಪೊಲಿಟಿಕಲ್, ಎಕನಾಮಿಕ್ಸ್ ಭೋದಕರಾಗಿದ್ದಾರೆ.

16ನೇ ಹಣಕಾಸು ಆಯೋಗದ ಕಾರ್ಯದರ್ಶಿ ಸ್ಥಾನಕ್ಕೆ ಋತ್ವಿಕ್ ರಂಜನಮ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಹಣಕಾಸು ಆಯೋಗದ ಇತರ ಸದಸ್ಯರ ಹೆಸರನ್ನು ಪ್ರತ್ಯೇಕವಾಗಿ ಘೋಷಿಸುವ ಸಾಧ್ಯತೆಯಿದೆ.

ಹಣಕಾಸು ಆಯೋಗದ ಜವಾಬ್ದಾರಿ ಏನು?

ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತೆರಿಗೆ ಆದಾಯದ ಹಂಚಿಕೆಗೆ ಸೂತ್ರ ರೂಪಿಸುವುದು ಹಣಕಾಸು ಆಯೋಗದ ಜವಾಬ್ದಾರಿ. ಐದು ವರ್ಷಕ್ಕೆಂದು ಆಯೋಗ ತೆರಿಗೆ ಹಂಚಿಕೆ ಸೂತ್ರಗಳನ್ನು ಶಿಫಾರಸು ಮಾಡುತ್ತದೆ. ಸರ್ಕಾರ ಈ ಶಿಫಾರಸುಗಳ ಆಧಾರದ ಮೇಲೆ ತೆರಿಗೆ ಹಂಚಿಕೆ ಮಾಡುತ್ತದೆ.

16ನೇ ಹಣಕಾಸು ಆಯೋಗ ಮಾಡುವ ಶಿಫಾರಸುಗಳು 2026ರ ಏಪ್ರಿಲ್​ನಿಂದ ಜಾರಿ ಆಗುತ್ತವೆ. ಈಗ ನೇಮಕ ಮಾಡಲಾಗಿರುವ ಈ ಆಯೋಗವು 2025ರ ಅಕ್ಟೋಬರ್ 31ರವರೆಗೆ ಮಾತ್ರ ಅಸ್ತಿತ್ವದಲ್ಲಿರುತ್ತದೆ. ಅಷ್ಟರೊಳಗೆ ಸರ್ಕಾರಕ್ಕೆ ತೆರಿಗೆ ಹಂಚಿಕೆಯ ಸೂತ್ರಗಳನ್ನು ಶಿಫಾರಸು ಮಾಡಬೇಕಾಗುತ್ತದೆ.

ಈಗ ಆಗುತ್ತಿರುವ ತೆರಿಗೆ ಹಂಚಿಕೆ ಸೂತ್ರವನ್ನು 15ನೇ ಹಣಕಾಸು ಆಯೋಗ ರೂಪಿಸಿತ್ತು. 2017ರ ನವೆಂಬರ್​ನಲ್ಲಿ ಈ ಆಯೋಗದ ರಚನೆಯಾಗಿತ್ತು. ಎನ್ ಕೆ ಸಿಂಗ್ ಮುಖ್ಯಸ್ಥರಾಗಿದ್ದರು. ಇದರ ವ್ಯಾಪ್ತಿಯನ್ನು ಐದು ವರ್ಷದ ಬದಲು ಆರು ವರ್ಷಕ್ಕೆ ಹೆಚ್ಚಿಸಲಾಗಿತ್ತು. 2025-26ರವರೆಗೆ ಇದರ ಶಿಫಾರಸುಗಳು ಜಾರಿಯಲ್ಲಿರುತ್ತವೆ.

andolanait

Recent Posts

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

18 mins ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

1 hour ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

2 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

3 hours ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

3 hours ago