BREAKING NEWS

16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ಅರವಿಂದ್ ಪನಗರಿಯಾ ನೇಮಕ

ನವದೆಹಲಿ: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಫೈನಾನ್ಸ್ ಕಮಿಷನ್ ಮುಖ್ಯಸ್ಥ ಸ್ಥಾನಕ್ಕೆ ಪನಗರಿಯಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೊರಡಿಸಿದ್ದ ಆದೇಶವನ್ನು ಹಣಕಾಸು ಇಲಾಖೆ ಇಂದು (ಭಾನುವಾರ) ಅಧಿಸೂಚನೆ ಹೊರಡಿಸಿದೆ. ಭಾರತೀಯ ಅಮೆರಿಕನ್ ಆರ್ಥಿಕ ತಜ್ಞರಾಗಿರುವ ಅರವಿಂದ್ ಪನಗರಿಯಾ 2015ರ ಜನವರಿಯಿಂದ 2017ರ ಆಗಸ್ಟ್ ತಿಂಗಳವರೆಗೆ ನೀತಿ ಆಯೋಗ್​ನಲ್ಲಿ ಸೇವೆ ಸಲ್ಲಿಸಿದ್ದರು.ಮೂಲತಃ ಅರವಿಂದ್ ಪನಗರಿಯಾ ಅವರು ರಾಜಸ್ಥಾನದವರಾಗಿದ್ದು, ಸದ್ಯ ಅಮೆರಿಕದ ವಿವಿಯೊಂದರಲ್ಲಿ ಪೊಲಿಟಿಕಲ್, ಎಕನಾಮಿಕ್ಸ್ ಭೋದಕರಾಗಿದ್ದಾರೆ.

16ನೇ ಹಣಕಾಸು ಆಯೋಗದ ಕಾರ್ಯದರ್ಶಿ ಸ್ಥಾನಕ್ಕೆ ಋತ್ವಿಕ್ ರಂಜನಮ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಹಣಕಾಸು ಆಯೋಗದ ಇತರ ಸದಸ್ಯರ ಹೆಸರನ್ನು ಪ್ರತ್ಯೇಕವಾಗಿ ಘೋಷಿಸುವ ಸಾಧ್ಯತೆಯಿದೆ.

ಹಣಕಾಸು ಆಯೋಗದ ಜವಾಬ್ದಾರಿ ಏನು?

ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತೆರಿಗೆ ಆದಾಯದ ಹಂಚಿಕೆಗೆ ಸೂತ್ರ ರೂಪಿಸುವುದು ಹಣಕಾಸು ಆಯೋಗದ ಜವಾಬ್ದಾರಿ. ಐದು ವರ್ಷಕ್ಕೆಂದು ಆಯೋಗ ತೆರಿಗೆ ಹಂಚಿಕೆ ಸೂತ್ರಗಳನ್ನು ಶಿಫಾರಸು ಮಾಡುತ್ತದೆ. ಸರ್ಕಾರ ಈ ಶಿಫಾರಸುಗಳ ಆಧಾರದ ಮೇಲೆ ತೆರಿಗೆ ಹಂಚಿಕೆ ಮಾಡುತ್ತದೆ.

16ನೇ ಹಣಕಾಸು ಆಯೋಗ ಮಾಡುವ ಶಿಫಾರಸುಗಳು 2026ರ ಏಪ್ರಿಲ್​ನಿಂದ ಜಾರಿ ಆಗುತ್ತವೆ. ಈಗ ನೇಮಕ ಮಾಡಲಾಗಿರುವ ಈ ಆಯೋಗವು 2025ರ ಅಕ್ಟೋಬರ್ 31ರವರೆಗೆ ಮಾತ್ರ ಅಸ್ತಿತ್ವದಲ್ಲಿರುತ್ತದೆ. ಅಷ್ಟರೊಳಗೆ ಸರ್ಕಾರಕ್ಕೆ ತೆರಿಗೆ ಹಂಚಿಕೆಯ ಸೂತ್ರಗಳನ್ನು ಶಿಫಾರಸು ಮಾಡಬೇಕಾಗುತ್ತದೆ.

ಈಗ ಆಗುತ್ತಿರುವ ತೆರಿಗೆ ಹಂಚಿಕೆ ಸೂತ್ರವನ್ನು 15ನೇ ಹಣಕಾಸು ಆಯೋಗ ರೂಪಿಸಿತ್ತು. 2017ರ ನವೆಂಬರ್​ನಲ್ಲಿ ಈ ಆಯೋಗದ ರಚನೆಯಾಗಿತ್ತು. ಎನ್ ಕೆ ಸಿಂಗ್ ಮುಖ್ಯಸ್ಥರಾಗಿದ್ದರು. ಇದರ ವ್ಯಾಪ್ತಿಯನ್ನು ಐದು ವರ್ಷದ ಬದಲು ಆರು ವರ್ಷಕ್ಕೆ ಹೆಚ್ಚಿಸಲಾಗಿತ್ತು. 2025-26ರವರೆಗೆ ಇದರ ಶಿಫಾರಸುಗಳು ಜಾರಿಯಲ್ಲಿರುತ್ತವೆ.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago