BREAKING NEWS

16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ಅರವಿಂದ್ ಪನಗರಿಯಾ ನೇಮಕ

ನವದೆಹಲಿ: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಫೈನಾನ್ಸ್ ಕಮಿಷನ್ ಮುಖ್ಯಸ್ಥ ಸ್ಥಾನಕ್ಕೆ ಪನಗರಿಯಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೊರಡಿಸಿದ್ದ ಆದೇಶವನ್ನು ಹಣಕಾಸು ಇಲಾಖೆ ಇಂದು (ಭಾನುವಾರ) ಅಧಿಸೂಚನೆ ಹೊರಡಿಸಿದೆ. ಭಾರತೀಯ ಅಮೆರಿಕನ್ ಆರ್ಥಿಕ ತಜ್ಞರಾಗಿರುವ ಅರವಿಂದ್ ಪನಗರಿಯಾ 2015ರ ಜನವರಿಯಿಂದ 2017ರ ಆಗಸ್ಟ್ ತಿಂಗಳವರೆಗೆ ನೀತಿ ಆಯೋಗ್​ನಲ್ಲಿ ಸೇವೆ ಸಲ್ಲಿಸಿದ್ದರು.ಮೂಲತಃ ಅರವಿಂದ್ ಪನಗರಿಯಾ ಅವರು ರಾಜಸ್ಥಾನದವರಾಗಿದ್ದು, ಸದ್ಯ ಅಮೆರಿಕದ ವಿವಿಯೊಂದರಲ್ಲಿ ಪೊಲಿಟಿಕಲ್, ಎಕನಾಮಿಕ್ಸ್ ಭೋದಕರಾಗಿದ್ದಾರೆ.

16ನೇ ಹಣಕಾಸು ಆಯೋಗದ ಕಾರ್ಯದರ್ಶಿ ಸ್ಥಾನಕ್ಕೆ ಋತ್ವಿಕ್ ರಂಜನಮ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಹಣಕಾಸು ಆಯೋಗದ ಇತರ ಸದಸ್ಯರ ಹೆಸರನ್ನು ಪ್ರತ್ಯೇಕವಾಗಿ ಘೋಷಿಸುವ ಸಾಧ್ಯತೆಯಿದೆ.

ಹಣಕಾಸು ಆಯೋಗದ ಜವಾಬ್ದಾರಿ ಏನು?

ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತೆರಿಗೆ ಆದಾಯದ ಹಂಚಿಕೆಗೆ ಸೂತ್ರ ರೂಪಿಸುವುದು ಹಣಕಾಸು ಆಯೋಗದ ಜವಾಬ್ದಾರಿ. ಐದು ವರ್ಷಕ್ಕೆಂದು ಆಯೋಗ ತೆರಿಗೆ ಹಂಚಿಕೆ ಸೂತ್ರಗಳನ್ನು ಶಿಫಾರಸು ಮಾಡುತ್ತದೆ. ಸರ್ಕಾರ ಈ ಶಿಫಾರಸುಗಳ ಆಧಾರದ ಮೇಲೆ ತೆರಿಗೆ ಹಂಚಿಕೆ ಮಾಡುತ್ತದೆ.

16ನೇ ಹಣಕಾಸು ಆಯೋಗ ಮಾಡುವ ಶಿಫಾರಸುಗಳು 2026ರ ಏಪ್ರಿಲ್​ನಿಂದ ಜಾರಿ ಆಗುತ್ತವೆ. ಈಗ ನೇಮಕ ಮಾಡಲಾಗಿರುವ ಈ ಆಯೋಗವು 2025ರ ಅಕ್ಟೋಬರ್ 31ರವರೆಗೆ ಮಾತ್ರ ಅಸ್ತಿತ್ವದಲ್ಲಿರುತ್ತದೆ. ಅಷ್ಟರೊಳಗೆ ಸರ್ಕಾರಕ್ಕೆ ತೆರಿಗೆ ಹಂಚಿಕೆಯ ಸೂತ್ರಗಳನ್ನು ಶಿಫಾರಸು ಮಾಡಬೇಕಾಗುತ್ತದೆ.

ಈಗ ಆಗುತ್ತಿರುವ ತೆರಿಗೆ ಹಂಚಿಕೆ ಸೂತ್ರವನ್ನು 15ನೇ ಹಣಕಾಸು ಆಯೋಗ ರೂಪಿಸಿತ್ತು. 2017ರ ನವೆಂಬರ್​ನಲ್ಲಿ ಈ ಆಯೋಗದ ರಚನೆಯಾಗಿತ್ತು. ಎನ್ ಕೆ ಸಿಂಗ್ ಮುಖ್ಯಸ್ಥರಾಗಿದ್ದರು. ಇದರ ವ್ಯಾಪ್ತಿಯನ್ನು ಐದು ವರ್ಷದ ಬದಲು ಆರು ವರ್ಷಕ್ಕೆ ಹೆಚ್ಚಿಸಲಾಗಿತ್ತು. 2025-26ರವರೆಗೆ ಇದರ ಶಿಫಾರಸುಗಳು ಜಾರಿಯಲ್ಲಿರುತ್ತವೆ.

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

5 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

8 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

9 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

10 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

11 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

16 hours ago