ಪಲ್ಲೆಕಲೆ : ಏಶ್ಯಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶನಿವಾರ ಟಾಸ್ ಜಯಿಸಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಈ ಕ್ಷಣದಲ್ಲಿ ಮಳೆ ಇಲ್ಲ. ಹೀಗಾಗಿ ಪಲ್ಲೆಕಲೆ ಮೈದಾನದ ಮೇಲಿನ ಹೊದಿಕೆಯನ್ನು ತೆಗೆಯಲಾಗಿದೆ. ಈ ಪಂದ್ಯಕ್ಕೆ ಮುಹಮ್ಮದ್ ಶಮಿ ಅಲಭ್ಯರಾಗಿದ್ದು, ಅವರ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.
ಪ್ರಸಕ್ತ ಟೂರ್ನಮೆಂಟ್ ನಲ್ಲಿ ಭಾರತ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಪಾಕಿಸ್ತಾನವು ಈಗಾಗಲೇ ನೇಪಾಳ ವಿರುದ್ಧ ಆಡಿರುವ ಉದ್ಘಾಟನಾ ಪಂದ್ಯವನ್ನು 238 ರನ್ ಅಂತರದಿಂದ ಗೆದ್ದುಕೊಂಡಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು 132 ಏಕದಿನ ಪಂದ್ಯಗಳನ್ನು ಆಡಿದ್ದು ಈ ಪೈಕಿ ಭಾರತ 55ರಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನವು 73ರಲ್ಲಿ ಗೆಲುವು ಕಂಡಿದೆ. ಏಶ್ಯಕಪ್ ನಲ್ಲಿ ಉಭಯ ತಂಡಗಳು 13 ಏಕದಿನ ಪಂದ್ಯಗಳನ್ನು ಆಡಿದ್ದು ಭಾರತ 7ರಲ್ಲಿ ಜಯ ಸಾಧಿಸಿದರೆ, ಪಾಕ್ 5 ಬಾರಿ ಗೆದ್ದಿದೆ.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…