ಪಲ್ಲೆಕಲೆ : ಏಶ್ಯಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶನಿವಾರ ಟಾಸ್ ಜಯಿಸಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಈ ಕ್ಷಣದಲ್ಲಿ ಮಳೆ ಇಲ್ಲ. ಹೀಗಾಗಿ ಪಲ್ಲೆಕಲೆ ಮೈದಾನದ ಮೇಲಿನ ಹೊದಿಕೆಯನ್ನು ತೆಗೆಯಲಾಗಿದೆ. ಈ ಪಂದ್ಯಕ್ಕೆ ಮುಹಮ್ಮದ್ ಶಮಿ ಅಲಭ್ಯರಾಗಿದ್ದು, ಅವರ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.
ಪ್ರಸಕ್ತ ಟೂರ್ನಮೆಂಟ್ ನಲ್ಲಿ ಭಾರತ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಪಾಕಿಸ್ತಾನವು ಈಗಾಗಲೇ ನೇಪಾಳ ವಿರುದ್ಧ ಆಡಿರುವ ಉದ್ಘಾಟನಾ ಪಂದ್ಯವನ್ನು 238 ರನ್ ಅಂತರದಿಂದ ಗೆದ್ದುಕೊಂಡಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು 132 ಏಕದಿನ ಪಂದ್ಯಗಳನ್ನು ಆಡಿದ್ದು ಈ ಪೈಕಿ ಭಾರತ 55ರಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನವು 73ರಲ್ಲಿ ಗೆಲುವು ಕಂಡಿದೆ. ಏಶ್ಯಕಪ್ ನಲ್ಲಿ ಉಭಯ ತಂಡಗಳು 13 ಏಕದಿನ ಪಂದ್ಯಗಳನ್ನು ಆಡಿದ್ದು ಭಾರತ 7ರಲ್ಲಿ ಜಯ ಸಾಧಿಸಿದರೆ, ಪಾಕ್ 5 ಬಾರಿ ಗೆದ್ದಿದೆ.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…