ಪಲ್ಲೆಕಲೆ : ಏಶ್ಯಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶನಿವಾರ ಟಾಸ್ ಜಯಿಸಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಈ ಕ್ಷಣದಲ್ಲಿ ಮಳೆ ಇಲ್ಲ. ಹೀಗಾಗಿ ಪಲ್ಲೆಕಲೆ ಮೈದಾನದ ಮೇಲಿನ ಹೊದಿಕೆಯನ್ನು ತೆಗೆಯಲಾಗಿದೆ. ಈ ಪಂದ್ಯಕ್ಕೆ ಮುಹಮ್ಮದ್ ಶಮಿ ಅಲಭ್ಯರಾಗಿದ್ದು, ಅವರ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.
ಪ್ರಸಕ್ತ ಟೂರ್ನಮೆಂಟ್ ನಲ್ಲಿ ಭಾರತ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಪಾಕಿಸ್ತಾನವು ಈಗಾಗಲೇ ನೇಪಾಳ ವಿರುದ್ಧ ಆಡಿರುವ ಉದ್ಘಾಟನಾ ಪಂದ್ಯವನ್ನು 238 ರನ್ ಅಂತರದಿಂದ ಗೆದ್ದುಕೊಂಡಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು 132 ಏಕದಿನ ಪಂದ್ಯಗಳನ್ನು ಆಡಿದ್ದು ಈ ಪೈಕಿ ಭಾರತ 55ರಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನವು 73ರಲ್ಲಿ ಗೆಲುವು ಕಂಡಿದೆ. ಏಶ್ಯಕಪ್ ನಲ್ಲಿ ಉಭಯ ತಂಡಗಳು 13 ಏಕದಿನ ಪಂದ್ಯಗಳನ್ನು ಆಡಿದ್ದು ಭಾರತ 7ರಲ್ಲಿ ಜಯ ಸಾಧಿಸಿದರೆ, ಪಾಕ್ 5 ಬಾರಿ ಗೆದ್ದಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…