BREAKING NEWS

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ : ಅಂಬಾನಿಗೆ ಸೆಡ್ಡು ಹೊಡೆದ ಅದಾನಿ

ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್‌ ಅದಾನಿ ಅವರು ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್‌ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ನಲ್ಲಿ ಹೊರಹೊಮ್ಮಿದ್ದಾರೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿ ಅದಾನಿ ಇದ್ದರೆ ಅಂಬಾನಿ 13ನೇ ಸ್ಥಾನದಲ್ಲಿದ್ದಾರೆ. ಒಟ್ಟು 97.6 ಬಿಲಿಯನ್‌ ಅಮೆರಿಕನ್‌ ಡಾಲರ್‌ ಸಂಪತ್ತಿನ ಒಡೆಯರಾಗಿದ್ದಾರೆ ಅದಾನಿ.

ಅತ್ತ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು ಅವರು ಒಟ್ಟು ಸಂಪತ್ತಿನ ಮೌಲ್ಯ 97 ಬಿಲಿಯನ್‌ ಅಮೆರಿಕನ್‌ ಡಾಲರ್‌ ಆಗಿದೆ.

ಅದಾನಿ ಸಂಸ್ಥೆಗಳು ಅವ್ಯವಹಾರ ನಡೆಸಿವೆ ಎಂಬ ಹಿಂಡೆನ್‌ಬರ್ಗ್‌ ವರದಿಯನ್ನಾಧರಿಸಿ ಸಂಸ್ಥೆಯ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾಗೊಳಿಸಿದ ನಂತರ ಅದಾನಿ ಷೇರುಗಳ ಬೆಲೆ ಏರಿಕೆ ಕಂಡಿತ್ತು.

ಇದಕ್ಕಿಂತ ಒಂದು ದಿನ ಹಿಂದ ಅದಾನಿ ಸಂಪತ್ತು ಮೌಲ್ಯ ರೂ. 8.98 ಲಕ್ಷ ಕೋಟಿ ಇದ್ದರೆ ಒಂದೇ ದಿನದಲ್ಲಿ ಅದು ರೂ. 9.37 ಲಕ್ಷ ಕೋಟಿಗೆ ಏರಿಕೆಯಾಗಿದೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago