BREAKING NEWS

Assembly Election Results 2023: ಬಿಜೆಪಿ ಗೆಲ್ಲಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ

ಇಂದು ( ಡಿಸೆಂಬರ್‌ 3 ) ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಸಮೀಕ್ಷೆಗಳನ್ನೆಲ್ಲಾ ತಲೆಕೆಳಗಾಗುವಂತೆ ಮಾಡಿದ್ದರೆ, ಇತ್ತ ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದೆ.

ಬಿಜೆಪಿ ಮೂರು ರಾಜ್ಯಗಳಲ್ಲಿ ಗೆದ್ದು ತೆಲಂಗಾಣದಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಗೆದ್ದು ಉತ್ತಮ ಹಂತದಲ್ಲಿದೆ. ಈ ಗೆಲುವಿನ ಕುರಿತು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೊದಲಿಗೆ ಛತ್ತೀಸ್‌ಘಡ, ರಾಜಸ್ಥಾನ ಹಾಗೂ ಮಧ್ಯ ಪ್ರದೇಶದ ಫಲಿತಾಂಶಗಳ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ “ಜನತಾ ಜನಾರ್ಧನರಿಗೆ ತಲೆ ನಾವು ತಲೆ ಬಾಗಿದ್ದೇವೆ. ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಬಂದಿರುವ ಫಲಿತಾಂಶ ದೇಶದ ಜನತೆ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಪರ ಇರುವ ಬಿಜೆಪಿಯನ್ನು ಆರಿಸಿದ್ದಾರೆ. ಅಭೂತಪೂರ್ವ ಬೆಂಬಲ ಕೊಟ್ಟ ಈ ರಾಜ್ಯಗಳ ಜನತೆಗೆ ನಾನು ಧನ್ಯವಾದ ತಿಳಿಸುತ್ತೇನೆ ಹಾಗೂ ಅವರ ಅಭಿವೃದ್ಧಿಗಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತೇವೆ ಎಂಬ ಭರವಸೆ ನೀಡುತ್ತಿದ್ದೇನೆ. ಕಷ್ಟಪಟ್ಟು ಕೆಲಸ ನಿರ್ವಹಿಸಿದ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ವಿಶೇಷ ಧನ್ಯವಾದಗಳು. ಅವರೆಲ್ಲಾ ಶ್ರಮದಿಂದ ಕೆಲಸ ಮಾಡಿದ್ದು ನಮ್ಮ ಪಕ್ಷ ಮಾಡಿದ ಅಭಿವೃದ್ಧಿಯನ್ನು ಜನರಿಗೆ ಮನವರಿಕೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ತೆಲಂಗಾಣದ ಜನತೆ ಬಗ್ಗೆ ಸಹ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ “ತೆಲಂಗಾಣದ ನನ್ನೆಲ್ಲಾ ಅಣ್ಣ-ತಮ್ಮ, ಅಕ್ಕ-ತಂಗಿಯರೇ, ಕಳೆದ ಕೆಲ ವರ್ಷಗಳಿಂದ ನೀವು ಬಿಜೆಪಿಗೆ ನೀಡಿದ ಬೆಂಬಲಕ್ಕೆ ಧನ್ಯವಾದಗಳು. ನಿಮ್ಮ ಬೆಂಬಲ ಹೆಚ್ಚುತ್ತಲೇ ಇದ್ದು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಲಿದೆ. ತೆಲಂಗಾಣ ಜನತೆ ಜತೆಗಿನ ನಮ್ಮ ಸಂಬಂಧ ಬಿಡಿಸಲಾಗದ್ದು ಹಾಗೂ ಅವರಿಗಾಗಿ ನಾವು ಶ್ರದ್ಧೆಯಿಂದ ಕೆಲಸ ಮಾಡಲಿದ್ದೇವೆ. ತೆಲಂಗಾಣದಲ್ಲಿ ಶ್ರಮವಹಿಸಿ ಕೆಲಸ ಮಾ ಡಿದ ಬಿಜೆಪಿ ಕಾರ್ಯಕರ್ತರಿಗೂ ಸಹ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

12 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

29 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

42 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago