BREAKING NEWS

Assembly Election Results 2023: ಬಿಜೆಪಿ ಗೆಲ್ಲಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ

ಇಂದು ( ಡಿಸೆಂಬರ್‌ 3 ) ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಸಮೀಕ್ಷೆಗಳನ್ನೆಲ್ಲಾ ತಲೆಕೆಳಗಾಗುವಂತೆ ಮಾಡಿದ್ದರೆ, ಇತ್ತ ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದೆ.

ಬಿಜೆಪಿ ಮೂರು ರಾಜ್ಯಗಳಲ್ಲಿ ಗೆದ್ದು ತೆಲಂಗಾಣದಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಗೆದ್ದು ಉತ್ತಮ ಹಂತದಲ್ಲಿದೆ. ಈ ಗೆಲುವಿನ ಕುರಿತು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೊದಲಿಗೆ ಛತ್ತೀಸ್‌ಘಡ, ರಾಜಸ್ಥಾನ ಹಾಗೂ ಮಧ್ಯ ಪ್ರದೇಶದ ಫಲಿತಾಂಶಗಳ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ “ಜನತಾ ಜನಾರ್ಧನರಿಗೆ ತಲೆ ನಾವು ತಲೆ ಬಾಗಿದ್ದೇವೆ. ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಬಂದಿರುವ ಫಲಿತಾಂಶ ದೇಶದ ಜನತೆ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಪರ ಇರುವ ಬಿಜೆಪಿಯನ್ನು ಆರಿಸಿದ್ದಾರೆ. ಅಭೂತಪೂರ್ವ ಬೆಂಬಲ ಕೊಟ್ಟ ಈ ರಾಜ್ಯಗಳ ಜನತೆಗೆ ನಾನು ಧನ್ಯವಾದ ತಿಳಿಸುತ್ತೇನೆ ಹಾಗೂ ಅವರ ಅಭಿವೃದ್ಧಿಗಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತೇವೆ ಎಂಬ ಭರವಸೆ ನೀಡುತ್ತಿದ್ದೇನೆ. ಕಷ್ಟಪಟ್ಟು ಕೆಲಸ ನಿರ್ವಹಿಸಿದ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ವಿಶೇಷ ಧನ್ಯವಾದಗಳು. ಅವರೆಲ್ಲಾ ಶ್ರಮದಿಂದ ಕೆಲಸ ಮಾಡಿದ್ದು ನಮ್ಮ ಪಕ್ಷ ಮಾಡಿದ ಅಭಿವೃದ್ಧಿಯನ್ನು ಜನರಿಗೆ ಮನವರಿಕೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ತೆಲಂಗಾಣದ ಜನತೆ ಬಗ್ಗೆ ಸಹ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ “ತೆಲಂಗಾಣದ ನನ್ನೆಲ್ಲಾ ಅಣ್ಣ-ತಮ್ಮ, ಅಕ್ಕ-ತಂಗಿಯರೇ, ಕಳೆದ ಕೆಲ ವರ್ಷಗಳಿಂದ ನೀವು ಬಿಜೆಪಿಗೆ ನೀಡಿದ ಬೆಂಬಲಕ್ಕೆ ಧನ್ಯವಾದಗಳು. ನಿಮ್ಮ ಬೆಂಬಲ ಹೆಚ್ಚುತ್ತಲೇ ಇದ್ದು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಲಿದೆ. ತೆಲಂಗಾಣ ಜನತೆ ಜತೆಗಿನ ನಮ್ಮ ಸಂಬಂಧ ಬಿಡಿಸಲಾಗದ್ದು ಹಾಗೂ ಅವರಿಗಾಗಿ ನಾವು ಶ್ರದ್ಧೆಯಿಂದ ಕೆಲಸ ಮಾಡಲಿದ್ದೇವೆ. ತೆಲಂಗಾಣದಲ್ಲಿ ಶ್ರಮವಹಿಸಿ ಕೆಲಸ ಮಾ ಡಿದ ಬಿಜೆಪಿ ಕಾರ್ಯಕರ್ತರಿಗೂ ಸಹ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

6 mins ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

1 hour ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

1 hour ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

7 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

7 hours ago