BREAKING NEWS

Assembly Election Results 2023: ಬಿಜೆಪಿ ಗೆಲ್ಲಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ

ಇಂದು ( ಡಿಸೆಂಬರ್‌ 3 ) ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಸಮೀಕ್ಷೆಗಳನ್ನೆಲ್ಲಾ ತಲೆಕೆಳಗಾಗುವಂತೆ ಮಾಡಿದ್ದರೆ, ಇತ್ತ ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದೆ.

ಬಿಜೆಪಿ ಮೂರು ರಾಜ್ಯಗಳಲ್ಲಿ ಗೆದ್ದು ತೆಲಂಗಾಣದಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಗೆದ್ದು ಉತ್ತಮ ಹಂತದಲ್ಲಿದೆ. ಈ ಗೆಲುವಿನ ಕುರಿತು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೊದಲಿಗೆ ಛತ್ತೀಸ್‌ಘಡ, ರಾಜಸ್ಥಾನ ಹಾಗೂ ಮಧ್ಯ ಪ್ರದೇಶದ ಫಲಿತಾಂಶಗಳ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ “ಜನತಾ ಜನಾರ್ಧನರಿಗೆ ತಲೆ ನಾವು ತಲೆ ಬಾಗಿದ್ದೇವೆ. ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಬಂದಿರುವ ಫಲಿತಾಂಶ ದೇಶದ ಜನತೆ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಪರ ಇರುವ ಬಿಜೆಪಿಯನ್ನು ಆರಿಸಿದ್ದಾರೆ. ಅಭೂತಪೂರ್ವ ಬೆಂಬಲ ಕೊಟ್ಟ ಈ ರಾಜ್ಯಗಳ ಜನತೆಗೆ ನಾನು ಧನ್ಯವಾದ ತಿಳಿಸುತ್ತೇನೆ ಹಾಗೂ ಅವರ ಅಭಿವೃದ್ಧಿಗಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತೇವೆ ಎಂಬ ಭರವಸೆ ನೀಡುತ್ತಿದ್ದೇನೆ. ಕಷ್ಟಪಟ್ಟು ಕೆಲಸ ನಿರ್ವಹಿಸಿದ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ವಿಶೇಷ ಧನ್ಯವಾದಗಳು. ಅವರೆಲ್ಲಾ ಶ್ರಮದಿಂದ ಕೆಲಸ ಮಾಡಿದ್ದು ನಮ್ಮ ಪಕ್ಷ ಮಾಡಿದ ಅಭಿವೃದ್ಧಿಯನ್ನು ಜನರಿಗೆ ಮನವರಿಕೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ತೆಲಂಗಾಣದ ಜನತೆ ಬಗ್ಗೆ ಸಹ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ “ತೆಲಂಗಾಣದ ನನ್ನೆಲ್ಲಾ ಅಣ್ಣ-ತಮ್ಮ, ಅಕ್ಕ-ತಂಗಿಯರೇ, ಕಳೆದ ಕೆಲ ವರ್ಷಗಳಿಂದ ನೀವು ಬಿಜೆಪಿಗೆ ನೀಡಿದ ಬೆಂಬಲಕ್ಕೆ ಧನ್ಯವಾದಗಳು. ನಿಮ್ಮ ಬೆಂಬಲ ಹೆಚ್ಚುತ್ತಲೇ ಇದ್ದು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಲಿದೆ. ತೆಲಂಗಾಣ ಜನತೆ ಜತೆಗಿನ ನಮ್ಮ ಸಂಬಂಧ ಬಿಡಿಸಲಾಗದ್ದು ಹಾಗೂ ಅವರಿಗಾಗಿ ನಾವು ಶ್ರದ್ಧೆಯಿಂದ ಕೆಲಸ ಮಾಡಲಿದ್ದೇವೆ. ತೆಲಂಗಾಣದಲ್ಲಿ ಶ್ರಮವಹಿಸಿ ಕೆಲಸ ಮಾ ಡಿದ ಬಿಜೆಪಿ ಕಾರ್ಯಕರ್ತರಿಗೂ ಸಹ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago