BREAKING NEWS

Assembly Election Results 2023: ಈ ಟ್ರೆಂಡ್‌ ರೀತಿನೇ ಮೋದಿನೂ ಗೆಲ್ತಾರೆ; ಈಶ್ವರಪ್ಪ ವಿಶ್ವಾಸ

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಗ್ಗೆ 11.30ರ ಸಮಯಕ್ಕೆ 4 ರಾಜ್ಯಗಳ ಮತಎಣಿಕೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ಕೇವಲ ಒಂದು ರಾಜ್ಯದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಹೌದು, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢ ಈ ಮೂರು ರಾಜ್ಯಗಳಲ್ಲಿಯೂ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದರೆ, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಹೀಗೆ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸುತ್ತಿರುವ ಸಂದರ್ಭದಲ್ಲಿ ಮಾತನಾಡಿರುವ ರಾಜ್ಯ ಬಿಜೆಪಿ ನಾಯಕ ಕೆಎಸ್‌ ಈಶ್ವರಪ್ಪ ಈ ಟ್ರೆಂಡ್‌ ರೀತಿಯಲ್ಲಿಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಗೆಲ್ಲಲಿದೆ, ಮೋದಿ ಮತ್ತೊಮ್ಮೆ ಪ್ರಧಾನಿ ಆಗ್ತಾರೆ ಎಂದಿದ್ದಾರೆ.

ಅಲ್ಲದೇ ಕಾಂಗ್ರೆಸ್‌ನ ಬಿಟ್ಟಿ ಭಾಗ್ಯಗಳ ಆಮಿಶಕ್ಕೆ ಜನ ಮಣೆ ಹಾಕಿಲ್ಲ, ದುಡ್ಡು ಸುರಿಯುವುದು ಮುಸ್ಲಿಂ ತುಷ್ಟೀಕರಣ ಮಾಡುವುದು ಈ ಬಾರಿ ಕೆಲಸ ಮಾಡಿಲ್ಲ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರಿದ ಮಾತನಾಡಿದ ಈಶ್ವರಪ್ಪ ಮಧ್ಯಪ್ರದೇಶದಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ರಾಜಸ್ಥಾನ ಹಾಗೂ ಛತ್ತೀಸ್‌ಗಢದ ಬಗ್ಗೆ ಹೆಚ್ಚಿನ ವಿಶ್ವಾಸವಿರಲಿಲ್ಲ. ಇಲ್ಲಿ ಬಿಜೆಪಿ ಗೆಲ್ಲುತ್ತಿರುವುದು ಇಡೀ ದೇಶವನ್ನೇ ಗೆದ್ದಂತಾಗುತ್ತಿದೆ ಎಂದು ಹೇಳಿದರು. ಇದಕ್ಕೆಲ್ಲಾ ಕಾರಣ ಮೋದಿ ಅವರ ಕೃಷ್ಣ ತಂತ್ರಗಾರಿಕೆ ಎಂದೂ ಸಹ ಈಶ್ವರಪ್ಪ ಕೊಂಡಾಡಿದರು.

andolana

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago