BREAKING NEWS

ಪಂಚರಾಜ್ಯಗಳಿಗೆ ವಿಧಾನಸಭಾ ಚುನಾವಣೆ ಘೋಷಣೆ: ನವೆಂಬರ್‌ನಲ್ಲಿ ಚುನಾವಣೆ

ನವದೆಹಲಿ : ಭಾರತದ ಚುನಾವಣಾ ಆಯೋಗವು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ.

ಮಿಜೋರಾಂನಲ್ಲಿ ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದರೆ, ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 7 ಮತ್ತು ನವೆಂಬರ್ 17ರಂದು, ರಾಜಸ್ಥಾನದಲ್ಲಿ ನವೆಂಬರ್‌ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್‌ 30ರಂದು ಚುನಾವಣೆ ನಡೆಯಲಿದೆ.

2024 ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಈ ವಿಧಾನಸಭಾ ಚುನಾವಣೆಗಳು ನಡೆಯಲಿರುವುದರಿಂದ ಅತ್ಯಂತ ಮಹತ್ವ ಪಡೆದಿವೆ.

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರವಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕ್ರಮವಾಗಿ ಅಶೋಕ್ ಗೆಹ್ಲೋಟ್ ಮತ್ತು ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರಗಳಿದ್ದರೆ, ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಹಾಗೂ ಮಿಜೋರಾಂನಲ್ಲಿ ಬಿಜೆಪಿ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ ಸರಕಾರವಿದೆ.

ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ವಿಧಾನಸಭೆಗಳ ಅವಧಿಯು ಜನವರಿ 2024 ರಲ್ಲಿ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳಲಿವೆ, ಮಿಜೋರಾಂ ವಿಧಾನಸಭೆಯ ಅವಧಿಯು ಈ ವರ್ಷ ಡಿಸೆಂಬರ್ 17 ರಂದು ಅಂತ್ಯವಾಗಲಿದೆ.

ರಾಜ್ಯ                    ಮತದಾನ ದಿನಾಂಕ           ಮತ ಎಣಿಕೆ

ಮಧ್ಯಪ್ರದೇಶ          ನವೆಂಬರ್ 17                  ಡಿಸೆಂಬರ್ 3

ರಾಜಸ್ಥಾನ            ನವೆಂಬರ್ 23                   ಡಿಸೆಂಬರ್ 3

ತೆಲಂಗಾಣ           ನವೆಂಬರ್ 30                   ಡಿಸೆಂಬರ್ 3

ಛತ್ತೀಸ್‌ಗಢ        ನವೆಂಬರ್ 7 ಮತ್ತು 17         ಡಿಸೆಂಬರ್ 3

ಮಿಜೋರಾಂ        ನವೆಂಬರ್ 7                     ಡಿಸೆಂಬರ್ 3

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ದಿನಾಂಕಗಳ ಕುರಿತು ಮಾಹಿತಿ ನೀಡಿದರು.

► ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಒಟ್ಟು 679 ವಿಧಾಸನಭಾ ಕ್ಷೇತ್ರಗಳಿವೆ.

► ಭಾರತದ ಒಟ್ಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರನೇ ಒಂದು ಭಾಗದಷ್ಟು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು ಒಟ್ಟು 16.14 ಕೋಟಿ ಮತದಾರರು, ಅಂದರೆ ಭಾರತದ ಒಟ್ಟು ಮತದಾರರ ಪೈಕಿ ಆರನೇ ಒಂದರಷ್ಟು ಮಂದಿ ಮತ ಚಲಾಯಿಸಲಿದ್ದಾರೆ.

► “40 ದಿನಗಳ ಅವಧಿಯಲ್ಲಿ ನಾವು ಎಲ್ಲಾ 5 ರಾಜ್ಯಗಳಿಗೆ ಭೇಟಿ ನೀಡಿದ್ದೇವೆ ಮತ್ತು ಅಲ್ಲಿನ ರಾಜಕೀಯ ಪಕ್ಷಗಳು ಹಾಗೂ ಕೇಂದ್ರ ಮತ್ತು ರಾಜ್ಯ ಜಾರಿ ಏಜನ್ಸಿಗಳೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದರು.

► ಈ ಐದು ರಾಜ್ಯಗಳಲ್ಲಿ 16 ಲಕ್ಷ ಹೊಸ ಮತದಾರರು ನೋಂದಾಯಿತರಾಗಿದ್ದಾರೆ.

► ಈ ಐದು ರಾಜ್ಯಗಳಾದ್ಯಂತ 177 ಲಕ್ಷ ಮತಗಟ್ಟೆಗಳಿರಲಿವೆ.

► ಎಲ್ಲಾ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಸೇರ್ಪಡೆಗೆ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

► ತೃತೀಯಲಿಂಗಿಗಳನ್ನೂ ಮತದಾರರ ಪಟ್ಟಿಗೆ ಸೇರಿಸಿ ಎಲ್ಲರನ್ನು ಒಳಗೊಳ್ಳುವಂತೆ ಮಾಡಲಾಗುವುದು ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

► ವಯಸ್ಸಾದ ಮತದಾರರಿಗೆ ಮನೆಗಳಿಂದಲೇ ಮತ ಚಲಾಯಿಸಲು ಐದು ದಿನ ಕಾಲಾವಕಾಶ ನೀಡಲಾಗುವುದು.

► ಯಾವುದೇ ಓಲೈಕೆಗಳು ಅಥವಾ ಭ್ರಷ್ಟಾಚಾರದ ಬಗ್ಗೆ ಎಚ್ಚರಿಕೆ ನೀಡಲು ವಿಜಿಲ್ ಆಪ್‌ ಬಳಸಲಾಗುವುದು.

► ವಿಜಿಲ್‌ ದೂರುಗಳಿಗೆ 100 ನಿಮಿಷಗಳೊಳಗೆ ಸ್ಪಂದಿಸಲಾಗುವುದು.

► ಎಲ್ಲಾ ರಾಜಕೀಯ ಪಕ್ಷಗಳು ಅಕ್ಟೋಬರ್ 31 ರೊಳಗೆ ತಾವು ಸ್ವೀಕರಿಸಿದ ಕೊಡುಗೆಗಳು ಮತ್ತು ದೇಣಿಗೆಗಳನ್ನು ವರದಿ ಮಾಡಬೇಕು

► ರಾಜಕೀಯ ಪಕ್ಷಗಳು ತಮ್ಮ ವಾರ್ಷಿಕ ವೆಚ್ಚದ ವರದಿಯನ್ನು ಡಿಜಿಟಲ್ ರೂಪದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು.

► ಎಲ್ಲಾ ರಾಜ್ಯ ಮತ್ತು ಕೇಂದ್ರ ಏಜೆನ್ಸಿಗಳು ತಾವು ವಶಡಿಸಿಕೊಂಡ ವಸ್ತುಗಳ ಮಾಹಿತಿಯನ್ನು ಕೇಂದ್ರ ಡೇಟಾಬೇಸ್‌ನಲ್ಲಿ ನಮೂದಿಸಬೇಕಿದೆ. ಈ ವ್ಯವಸ್ಥೆಯನ್ನು ಮೊದಲ ಬಾರಿ ಜಾರಿಗೊಳಿಸಲಾಗಿದೆ.

andolanait

Recent Posts

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

30 mins ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

1 hour ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

2 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

3 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

7 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

9 hours ago