BREAKING NEWS

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭ : ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಆರ್​.ವಿ.ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದ್ದಾರೆ. ಕನಕಪುರ ಕ್ಷೇತ್ರದ ಶಾಸಕ, ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್, ದೇವನಹಳ್ಳಿ ಶಾಸಕ ಕೆ.ಎಚ್​.ಮುನಿಯಪ್ಪ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ : ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದರು. ಇದಕ್ಕೆ ಸದನದಲ್ಲಿ ಇತರೆ ಸದನದ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೆ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್​ ಜಾರಕಿಹೊಳಿ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್​ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

12 ವರ್ಷದ ನಂತರ ಮತ್ತೆ ವಿಧಾನಸೌಧಕ್ಕೆ ಹೆಜ್ಜೆ ಇಡುತ್ತಿದ್ದೇನೆ : ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, 12 ವರ್ಷದ ನಂತರ ಮತ್ತೆ ವಿಧಾನಸೌಧಕ್ಕೆ ಹೆಜ್ಜೆ ಇಡುತ್ತಿದ್ದೇನೆ. ನಮ್ಮ ಪಕ್ಷಕ್ಕೆ ಜನರು ಆಶೀರ್ವಾದ ಮಾಡಿದ್ದರಿಂದ ನಾನು ಚುನಾವಣೆಯಲ್ಲಿ ಗೆದ್ದು ವಿಧಾನಸೌಧ ಪ್ರವೇಶ ಮಾಡಿದ್ದೇನೆ. ಕರ್ನಾಟಕದ ಜನರ ಒಳಿತಿಗಾಗಿ ಕಲ್ಯಾಣ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸದ್ಯ ನಾನೊಬ್ಬನೇ ಗೆದ್ದು ವಿಧಾನಸೌಧಕ್ಕೆ ಹೆಜ್ಜೆ ಇಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಹುಮತದಿಂದ ವಿಧಾನಸೌಧಕ್ಕೆ ಬರುತ್ತೇನೆ. ಜನಪರವಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಬೆಂಬಲ ಇರುತ್ತದೆ ಎಂದು ಹೇಳಿದರು.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago