ಶಿರಸಿ: ಇಲ್ಲಿನ ರೌಡಿ ಶೀಟರ್ ಫಯಾಜ್ ಚೌಟಿ (ಪಯ್ಯು) ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ತನ್ನ ಬೆಂಬಲಿಗರೊಂದಿಗೆ ಇತ್ತೀಚೆಗೆ ಗುಪ್ತವಾಗಿ ಸಭೆ ನಡೆಸಿರುವುದು ಇದೀಗ ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ.
ದರೋಡೆ, ಬ್ಲಾಕ್ ಮೇಲ್, ಹಣ ವಂಚನೆ, ಅಪಹರಣ ಸೇರಿದಂತೆ 17ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರುವ ಫಯಾಜ್ ಚೌಟಿ, ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ 5 ದಿನಗಳ ಹಿಂದೆ ಗುಪ್ತವಾಗಿ 50ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಕಾಗೇರಿ ಕಚೇರಿಯಲ್ಲಿ ಚುನಾವಣೆ ಸಂಬಂಧ ಚೌಟಿ ಸಭೆ ನಡೆಸಿರುವ ಫೊಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಫೋಟೊದಲ್ಲಿ ಕಾಗೇರಿ ಪಕ್ಕದಲ್ಲೇ ಕುಳಿತು ಚೌಟಿ ಸಭೆ ನಡೆಸಿದ್ದಾನೆ. ಇನ್ನು ಸಭೆಯ ಎರಡು ದಿನದ ನಂತರ ಹಂದಿ ಅಣ್ಣಿ ಕೊಲೆ ಆರೋಪಿಗಳನ್ನು ತನ್ನ ಅಂಬ್ಯುಲೆನ್ಸ್ ಮೂಲಕ ಎಸ್ಕೆಪ್ ಮಾಡಿಸಿದ ಆರೋಪದಡಿ 2 ದಿನಗಳ ಹಿಂದೆಯಷ್ಟೇ ದಾವಣಗೆರೆ ಪೊಲೀಸರಿಂದ ಬಂಧನವಾಗಿದ್ದು, ಹೀಗಾಗಿ ಈ ಭೇಟಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕಾಗೇರಿ ಕಚೇರಿ ಮೂಲಗಳ ಪ್ರಕಾರ ಈತ ಕ್ಷೇತ್ರದ ಯಾವುದೋ ಸಮಸ್ಯೆ ಇಟ್ಟುಕೊಂಡು ಕಾಗೇರಿ ಬಳಿ ಚರ್ಚೆಗೆ ಬಂದಿದ್ದರು ಎಂದು ಹೇಳಲಾಗಿದೆ.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…