BREAKING NEWS

ರೌಡಿ ಶೀಟರ್ ಜೊತೆ ವಿಧಾನಸಭೆ ಅಧ್ಯಕ್ಷ ಕಾಗೇರಿ ಗುಪ್ತ ಸಭೆ: ಫೋಟೊ ಹರಿದಾಟ

ಶಿರಸಿ: ಇಲ್ಲಿನ ರೌಡಿ ಶೀಟರ್ ಫಯಾಜ್ ಚೌಟಿ (ಪಯ್ಯು) ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ತನ್ನ ಬೆಂಬಲಿಗರೊಂದಿಗೆ ಇತ್ತೀಚೆಗೆ ಗುಪ್ತವಾಗಿ ಸಭೆ ನಡೆಸಿರುವುದು ಇದೀಗ ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ.

ದರೋಡೆ, ಬ್ಲಾಕ್ ಮೇಲ್, ಹಣ ವಂಚನೆ, ಅಪಹರಣ ಸೇರಿದಂತೆ 17ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರುವ ಫಯಾಜ್ ಚೌಟಿ, ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ 5 ದಿನಗಳ ಹಿಂದೆ ಗುಪ್ತವಾಗಿ 50ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಕಾಗೇರಿ ಕಚೇರಿಯಲ್ಲಿ ಚುನಾವಣೆ ಸಂಬಂಧ ಚೌಟಿ ಸಭೆ ನಡೆಸಿರುವ ಫೊಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಫೋಟೊದಲ್ಲಿ ಕಾಗೇರಿ ಪಕ್ಕದಲ್ಲೇ ಕುಳಿತು ಚೌಟಿ ಸಭೆ ನಡೆಸಿದ್ದಾನೆ. ಇನ್ನು ಸಭೆಯ ಎರಡು ದಿನದ ನಂತರ ಹಂದಿ ಅಣ್ಣಿ ಕೊಲೆ ಆರೋಪಿಗಳನ್ನು ತನ್ನ ಅಂಬ್ಯುಲೆನ್ಸ್ ಮೂಲಕ ಎಸ್ಕೆಪ್ ಮಾಡಿಸಿದ ಆರೋಪದಡಿ 2 ದಿನಗಳ ಹಿಂದೆಯಷ್ಟೇ ದಾವಣಗೆರೆ ಪೊಲೀಸರಿಂದ ಬಂಧನವಾಗಿದ್ದು, ಹೀಗಾಗಿ ಈ ಭೇಟಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಾಗೇರಿ ಕಚೇರಿ ಮೂಲಗಳ ಪ್ರಕಾರ ಈತ ಕ್ಷೇತ್ರದ ಯಾವುದೋ ಸಮಸ್ಯೆ ಇಟ್ಟುಕೊಂಡು ಕಾಗೇರಿ ಬಳಿ ಚರ್ಚೆಗೆ ಬಂದಿದ್ದರು ಎಂದು ಹೇಳಲಾಗಿದೆ.

andolanait

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

30 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

49 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

3 hours ago