ಶಿರಸಿ: ಇಲ್ಲಿನ ರೌಡಿ ಶೀಟರ್ ಫಯಾಜ್ ಚೌಟಿ (ಪಯ್ಯು) ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ತನ್ನ ಬೆಂಬಲಿಗರೊಂದಿಗೆ ಇತ್ತೀಚೆಗೆ ಗುಪ್ತವಾಗಿ ಸಭೆ ನಡೆಸಿರುವುದು ಇದೀಗ ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ.
ದರೋಡೆ, ಬ್ಲಾಕ್ ಮೇಲ್, ಹಣ ವಂಚನೆ, ಅಪಹರಣ ಸೇರಿದಂತೆ 17ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರುವ ಫಯಾಜ್ ಚೌಟಿ, ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ 5 ದಿನಗಳ ಹಿಂದೆ ಗುಪ್ತವಾಗಿ 50ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಕಾಗೇರಿ ಕಚೇರಿಯಲ್ಲಿ ಚುನಾವಣೆ ಸಂಬಂಧ ಚೌಟಿ ಸಭೆ ನಡೆಸಿರುವ ಫೊಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಫೋಟೊದಲ್ಲಿ ಕಾಗೇರಿ ಪಕ್ಕದಲ್ಲೇ ಕುಳಿತು ಚೌಟಿ ಸಭೆ ನಡೆಸಿದ್ದಾನೆ. ಇನ್ನು ಸಭೆಯ ಎರಡು ದಿನದ ನಂತರ ಹಂದಿ ಅಣ್ಣಿ ಕೊಲೆ ಆರೋಪಿಗಳನ್ನು ತನ್ನ ಅಂಬ್ಯುಲೆನ್ಸ್ ಮೂಲಕ ಎಸ್ಕೆಪ್ ಮಾಡಿಸಿದ ಆರೋಪದಡಿ 2 ದಿನಗಳ ಹಿಂದೆಯಷ್ಟೇ ದಾವಣಗೆರೆ ಪೊಲೀಸರಿಂದ ಬಂಧನವಾಗಿದ್ದು, ಹೀಗಾಗಿ ಈ ಭೇಟಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕಾಗೇರಿ ಕಚೇರಿ ಮೂಲಗಳ ಪ್ರಕಾರ ಈತ ಕ್ಷೇತ್ರದ ಯಾವುದೋ ಸಮಸ್ಯೆ ಇಟ್ಟುಕೊಂಡು ಕಾಗೇರಿ ಬಳಿ ಚರ್ಚೆಗೆ ಬಂದಿದ್ದರು ಎಂದು ಹೇಳಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…