BREAKING NEWS

ಎಂಟು ಪಟ್ಟು ಏರಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಆಸ್ತಿ

ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ.

ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್‌ನಲ್ಲಿ ಒಟ್ಟು₹ 11.99 ಕೋಟಿ ಮೌಲ್ಯದ ಆಸ್ತಿ ಇತ್ತು. ಈಗ ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ₹ 96.15 ಕೋಟಿ. ಸಚಿವರು ಮತ್ತು ಅವರ ಪತ್ನಿ ಎಸ್‌.ಪಿ. ಹೇಮಲತಾ ಇಬ್ಬರೂ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.

2019ರ ಉಪ ಚುನಾವಣೆ ಸಂದರ್ಭದಲ್ಲಿ ಗೋಪಾಲಯ್ಯ ಕುಟುಂಬ ಒಟ್ಟು ₹ 11.78 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿತ್ತು. ಈಗ ಅವರ ಕುಟುಂಬ ಹೊಂದಿರುವ ಒಟ್ಟು ಸ್ಥಿರಾಸ್ತಿ ₹ 95.91 ಕೋಟಿ ಮೌಲ್ಯದ್ದು ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಇಬ್ಬರ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. 2019ರಲ್ಲಿ ಗೋಪಾಲಯ್ಯ ಅವರ ವಾರ್ಷಿಕ ಆದಾಯ ₹ 6.70 ಲಕ್ಷ ಇದ್ದು, ಈಗ ₹ 3.47 ಕೋಟಿಗೆ ಏರಿಕೆಯಾಗಿದೆ. ಹೇಮಲತಾ ಅವರ ವಾರ್ಷಿಕ ಆದಾಯ ₹ 5.21 ಲಕ್ಷದಿಂದ ₹ 3.37 ಕೋಟಿಗೆ ಏರಿಕೆಯಾಗಿದೆ. ಸಾಲದಲ್ಲೂ ಭಾರಿ ಏರಿಕೆಯಾಗಿದೆ. ಸಚಿವರು 2019ರಲ್ಲಿ ₹ 1.79 ಕೋಟಿ ಸಾಲ ಹೊಂದಿದ್ದರು. ಈಗ ಸಾಲದ ಮೊತ್ತ ₹ 22.49 ಕೋಟಿಗೆ ಏರಿಕೆಯಾಗಿದೆ. ಪತ್ನಿಯ ಸಾಲ ₹ 5.26 ಕೋಟಿಯಿಂದ ₹ 26.01 ಕೋಟಿಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಪ್ರಮಾಣ ಪತ್ರದಲ್ಲಿದೆ.

ಸಚಿವರ ಬಳಿ ಮಹೀಂದ್ರಾ ಜೀಪ್‌, ಟೊಯೊಟಾ ಕ್ವಾಲಿಸ್‌, ಟೊಯೊಟಾ ಇನ್ನೋವಾ, ಟೊಯೊಟಾ ಫಾರ್ಚೂನರ್‌ ಕಾರುಗಳಿವೆ. ಕುಟುಂಬದ ಬಳಿ 18 ಕೆ.ಜಿ. ಬೆಳ್ಳಿ ಮತ್ತು 2 ಕೆ.ಜಿ.ಯಷ್ಟು ಚಿನ್ನವಿದೆ.

lokesh

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

2 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

5 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

5 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

5 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

6 hours ago