BREAKING NEWS

ಎಂಟು ಪಟ್ಟು ಏರಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಆಸ್ತಿ

ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ.

ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್‌ನಲ್ಲಿ ಒಟ್ಟು₹ 11.99 ಕೋಟಿ ಮೌಲ್ಯದ ಆಸ್ತಿ ಇತ್ತು. ಈಗ ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ₹ 96.15 ಕೋಟಿ. ಸಚಿವರು ಮತ್ತು ಅವರ ಪತ್ನಿ ಎಸ್‌.ಪಿ. ಹೇಮಲತಾ ಇಬ್ಬರೂ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.

2019ರ ಉಪ ಚುನಾವಣೆ ಸಂದರ್ಭದಲ್ಲಿ ಗೋಪಾಲಯ್ಯ ಕುಟುಂಬ ಒಟ್ಟು ₹ 11.78 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿತ್ತು. ಈಗ ಅವರ ಕುಟುಂಬ ಹೊಂದಿರುವ ಒಟ್ಟು ಸ್ಥಿರಾಸ್ತಿ ₹ 95.91 ಕೋಟಿ ಮೌಲ್ಯದ್ದು ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಇಬ್ಬರ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. 2019ರಲ್ಲಿ ಗೋಪಾಲಯ್ಯ ಅವರ ವಾರ್ಷಿಕ ಆದಾಯ ₹ 6.70 ಲಕ್ಷ ಇದ್ದು, ಈಗ ₹ 3.47 ಕೋಟಿಗೆ ಏರಿಕೆಯಾಗಿದೆ. ಹೇಮಲತಾ ಅವರ ವಾರ್ಷಿಕ ಆದಾಯ ₹ 5.21 ಲಕ್ಷದಿಂದ ₹ 3.37 ಕೋಟಿಗೆ ಏರಿಕೆಯಾಗಿದೆ. ಸಾಲದಲ್ಲೂ ಭಾರಿ ಏರಿಕೆಯಾಗಿದೆ. ಸಚಿವರು 2019ರಲ್ಲಿ ₹ 1.79 ಕೋಟಿ ಸಾಲ ಹೊಂದಿದ್ದರು. ಈಗ ಸಾಲದ ಮೊತ್ತ ₹ 22.49 ಕೋಟಿಗೆ ಏರಿಕೆಯಾಗಿದೆ. ಪತ್ನಿಯ ಸಾಲ ₹ 5.26 ಕೋಟಿಯಿಂದ ₹ 26.01 ಕೋಟಿಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಪ್ರಮಾಣ ಪತ್ರದಲ್ಲಿದೆ.

ಸಚಿವರ ಬಳಿ ಮಹೀಂದ್ರಾ ಜೀಪ್‌, ಟೊಯೊಟಾ ಕ್ವಾಲಿಸ್‌, ಟೊಯೊಟಾ ಇನ್ನೋವಾ, ಟೊಯೊಟಾ ಫಾರ್ಚೂನರ್‌ ಕಾರುಗಳಿವೆ. ಕುಟುಂಬದ ಬಳಿ 18 ಕೆ.ಜಿ. ಬೆಳ್ಳಿ ಮತ್ತು 2 ಕೆ.ಜಿ.ಯಷ್ಟು ಚಿನ್ನವಿದೆ.

lokesh

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

2 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

3 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

4 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

4 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

4 hours ago