BREAKING NEWS

ಎಂಟು ಪಟ್ಟು ಏರಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಆಸ್ತಿ

ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ.

ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್‌ನಲ್ಲಿ ಒಟ್ಟು₹ 11.99 ಕೋಟಿ ಮೌಲ್ಯದ ಆಸ್ತಿ ಇತ್ತು. ಈಗ ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ₹ 96.15 ಕೋಟಿ. ಸಚಿವರು ಮತ್ತು ಅವರ ಪತ್ನಿ ಎಸ್‌.ಪಿ. ಹೇಮಲತಾ ಇಬ್ಬರೂ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.

2019ರ ಉಪ ಚುನಾವಣೆ ಸಂದರ್ಭದಲ್ಲಿ ಗೋಪಾಲಯ್ಯ ಕುಟುಂಬ ಒಟ್ಟು ₹ 11.78 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿತ್ತು. ಈಗ ಅವರ ಕುಟುಂಬ ಹೊಂದಿರುವ ಒಟ್ಟು ಸ್ಥಿರಾಸ್ತಿ ₹ 95.91 ಕೋಟಿ ಮೌಲ್ಯದ್ದು ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಇಬ್ಬರ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. 2019ರಲ್ಲಿ ಗೋಪಾಲಯ್ಯ ಅವರ ವಾರ್ಷಿಕ ಆದಾಯ ₹ 6.70 ಲಕ್ಷ ಇದ್ದು, ಈಗ ₹ 3.47 ಕೋಟಿಗೆ ಏರಿಕೆಯಾಗಿದೆ. ಹೇಮಲತಾ ಅವರ ವಾರ್ಷಿಕ ಆದಾಯ ₹ 5.21 ಲಕ್ಷದಿಂದ ₹ 3.37 ಕೋಟಿಗೆ ಏರಿಕೆಯಾಗಿದೆ. ಸಾಲದಲ್ಲೂ ಭಾರಿ ಏರಿಕೆಯಾಗಿದೆ. ಸಚಿವರು 2019ರಲ್ಲಿ ₹ 1.79 ಕೋಟಿ ಸಾಲ ಹೊಂದಿದ್ದರು. ಈಗ ಸಾಲದ ಮೊತ್ತ ₹ 22.49 ಕೋಟಿಗೆ ಏರಿಕೆಯಾಗಿದೆ. ಪತ್ನಿಯ ಸಾಲ ₹ 5.26 ಕೋಟಿಯಿಂದ ₹ 26.01 ಕೋಟಿಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಪ್ರಮಾಣ ಪತ್ರದಲ್ಲಿದೆ.

ಸಚಿವರ ಬಳಿ ಮಹೀಂದ್ರಾ ಜೀಪ್‌, ಟೊಯೊಟಾ ಕ್ವಾಲಿಸ್‌, ಟೊಯೊಟಾ ಇನ್ನೋವಾ, ಟೊಯೊಟಾ ಫಾರ್ಚೂನರ್‌ ಕಾರುಗಳಿವೆ. ಕುಟುಂಬದ ಬಳಿ 18 ಕೆ.ಜಿ. ಬೆಳ್ಳಿ ಮತ್ತು 2 ಕೆ.ಜಿ.ಯಷ್ಟು ಚಿನ್ನವಿದೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago