ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ.
ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್ನಲ್ಲಿ ಒಟ್ಟು₹ 11.99 ಕೋಟಿ ಮೌಲ್ಯದ ಆಸ್ತಿ ಇತ್ತು. ಈಗ ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ₹ 96.15 ಕೋಟಿ. ಸಚಿವರು ಮತ್ತು ಅವರ ಪತ್ನಿ ಎಸ್.ಪಿ. ಹೇಮಲತಾ ಇಬ್ಬರೂ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.
2019ರ ಉಪ ಚುನಾವಣೆ ಸಂದರ್ಭದಲ್ಲಿ ಗೋಪಾಲಯ್ಯ ಕುಟುಂಬ ಒಟ್ಟು ₹ 11.78 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿತ್ತು. ಈಗ ಅವರ ಕುಟುಂಬ ಹೊಂದಿರುವ ಒಟ್ಟು ಸ್ಥಿರಾಸ್ತಿ ₹ 95.91 ಕೋಟಿ ಮೌಲ್ಯದ್ದು ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.
ಇಬ್ಬರ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. 2019ರಲ್ಲಿ ಗೋಪಾಲಯ್ಯ ಅವರ ವಾರ್ಷಿಕ ಆದಾಯ ₹ 6.70 ಲಕ್ಷ ಇದ್ದು, ಈಗ ₹ 3.47 ಕೋಟಿಗೆ ಏರಿಕೆಯಾಗಿದೆ. ಹೇಮಲತಾ ಅವರ ವಾರ್ಷಿಕ ಆದಾಯ ₹ 5.21 ಲಕ್ಷದಿಂದ ₹ 3.37 ಕೋಟಿಗೆ ಏರಿಕೆಯಾಗಿದೆ. ಸಾಲದಲ್ಲೂ ಭಾರಿ ಏರಿಕೆಯಾಗಿದೆ. ಸಚಿವರು 2019ರಲ್ಲಿ ₹ 1.79 ಕೋಟಿ ಸಾಲ ಹೊಂದಿದ್ದರು. ಈಗ ಸಾಲದ ಮೊತ್ತ ₹ 22.49 ಕೋಟಿಗೆ ಏರಿಕೆಯಾಗಿದೆ. ಪತ್ನಿಯ ಸಾಲ ₹ 5.26 ಕೋಟಿಯಿಂದ ₹ 26.01 ಕೋಟಿಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಪ್ರಮಾಣ ಪತ್ರದಲ್ಲಿದೆ.
ಸಚಿವರ ಬಳಿ ಮಹೀಂದ್ರಾ ಜೀಪ್, ಟೊಯೊಟಾ ಕ್ವಾಲಿಸ್, ಟೊಯೊಟಾ ಇನ್ನೋವಾ, ಟೊಯೊಟಾ ಫಾರ್ಚೂನರ್ ಕಾರುಗಳಿವೆ. ಕುಟುಂಬದ ಬಳಿ 18 ಕೆ.ಜಿ. ಬೆಳ್ಳಿ ಮತ್ತು 2 ಕೆ.ಜಿ.ಯಷ್ಟು ಚಿನ್ನವಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…