ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ.
ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್ನಲ್ಲಿ ಒಟ್ಟು₹ 11.99 ಕೋಟಿ ಮೌಲ್ಯದ ಆಸ್ತಿ ಇತ್ತು. ಈಗ ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ₹ 96.15 ಕೋಟಿ. ಸಚಿವರು ಮತ್ತು ಅವರ ಪತ್ನಿ ಎಸ್.ಪಿ. ಹೇಮಲತಾ ಇಬ್ಬರೂ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.
2019ರ ಉಪ ಚುನಾವಣೆ ಸಂದರ್ಭದಲ್ಲಿ ಗೋಪಾಲಯ್ಯ ಕುಟುಂಬ ಒಟ್ಟು ₹ 11.78 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿತ್ತು. ಈಗ ಅವರ ಕುಟುಂಬ ಹೊಂದಿರುವ ಒಟ್ಟು ಸ್ಥಿರಾಸ್ತಿ ₹ 95.91 ಕೋಟಿ ಮೌಲ್ಯದ್ದು ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.
ಇಬ್ಬರ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. 2019ರಲ್ಲಿ ಗೋಪಾಲಯ್ಯ ಅವರ ವಾರ್ಷಿಕ ಆದಾಯ ₹ 6.70 ಲಕ್ಷ ಇದ್ದು, ಈಗ ₹ 3.47 ಕೋಟಿಗೆ ಏರಿಕೆಯಾಗಿದೆ. ಹೇಮಲತಾ ಅವರ ವಾರ್ಷಿಕ ಆದಾಯ ₹ 5.21 ಲಕ್ಷದಿಂದ ₹ 3.37 ಕೋಟಿಗೆ ಏರಿಕೆಯಾಗಿದೆ. ಸಾಲದಲ್ಲೂ ಭಾರಿ ಏರಿಕೆಯಾಗಿದೆ. ಸಚಿವರು 2019ರಲ್ಲಿ ₹ 1.79 ಕೋಟಿ ಸಾಲ ಹೊಂದಿದ್ದರು. ಈಗ ಸಾಲದ ಮೊತ್ತ ₹ 22.49 ಕೋಟಿಗೆ ಏರಿಕೆಯಾಗಿದೆ. ಪತ್ನಿಯ ಸಾಲ ₹ 5.26 ಕೋಟಿಯಿಂದ ₹ 26.01 ಕೋಟಿಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಪ್ರಮಾಣ ಪತ್ರದಲ್ಲಿದೆ.
ಸಚಿವರ ಬಳಿ ಮಹೀಂದ್ರಾ ಜೀಪ್, ಟೊಯೊಟಾ ಕ್ವಾಲಿಸ್, ಟೊಯೊಟಾ ಇನ್ನೋವಾ, ಟೊಯೊಟಾ ಫಾರ್ಚೂನರ್ ಕಾರುಗಳಿವೆ. ಕುಟುಂಬದ ಬಳಿ 18 ಕೆ.ಜಿ. ಬೆಳ್ಳಿ ಮತ್ತು 2 ಕೆ.ಜಿ.ಯಷ್ಟು ಚಿನ್ನವಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…