BREAKING NEWS

ಎಂಟು ಪಟ್ಟು ಏರಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಆಸ್ತಿ

ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ.

ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್‌ನಲ್ಲಿ ಒಟ್ಟು₹ 11.99 ಕೋಟಿ ಮೌಲ್ಯದ ಆಸ್ತಿ ಇತ್ತು. ಈಗ ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ₹ 96.15 ಕೋಟಿ. ಸಚಿವರು ಮತ್ತು ಅವರ ಪತ್ನಿ ಎಸ್‌.ಪಿ. ಹೇಮಲತಾ ಇಬ್ಬರೂ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.

2019ರ ಉಪ ಚುನಾವಣೆ ಸಂದರ್ಭದಲ್ಲಿ ಗೋಪಾಲಯ್ಯ ಕುಟುಂಬ ಒಟ್ಟು ₹ 11.78 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿತ್ತು. ಈಗ ಅವರ ಕುಟುಂಬ ಹೊಂದಿರುವ ಒಟ್ಟು ಸ್ಥಿರಾಸ್ತಿ ₹ 95.91 ಕೋಟಿ ಮೌಲ್ಯದ್ದು ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಇಬ್ಬರ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. 2019ರಲ್ಲಿ ಗೋಪಾಲಯ್ಯ ಅವರ ವಾರ್ಷಿಕ ಆದಾಯ ₹ 6.70 ಲಕ್ಷ ಇದ್ದು, ಈಗ ₹ 3.47 ಕೋಟಿಗೆ ಏರಿಕೆಯಾಗಿದೆ. ಹೇಮಲತಾ ಅವರ ವಾರ್ಷಿಕ ಆದಾಯ ₹ 5.21 ಲಕ್ಷದಿಂದ ₹ 3.37 ಕೋಟಿಗೆ ಏರಿಕೆಯಾಗಿದೆ. ಸಾಲದಲ್ಲೂ ಭಾರಿ ಏರಿಕೆಯಾಗಿದೆ. ಸಚಿವರು 2019ರಲ್ಲಿ ₹ 1.79 ಕೋಟಿ ಸಾಲ ಹೊಂದಿದ್ದರು. ಈಗ ಸಾಲದ ಮೊತ್ತ ₹ 22.49 ಕೋಟಿಗೆ ಏರಿಕೆಯಾಗಿದೆ. ಪತ್ನಿಯ ಸಾಲ ₹ 5.26 ಕೋಟಿಯಿಂದ ₹ 26.01 ಕೋಟಿಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಪ್ರಮಾಣ ಪತ್ರದಲ್ಲಿದೆ.

ಸಚಿವರ ಬಳಿ ಮಹೀಂದ್ರಾ ಜೀಪ್‌, ಟೊಯೊಟಾ ಕ್ವಾಲಿಸ್‌, ಟೊಯೊಟಾ ಇನ್ನೋವಾ, ಟೊಯೊಟಾ ಫಾರ್ಚೂನರ್‌ ಕಾರುಗಳಿವೆ. ಕುಟುಂಬದ ಬಳಿ 18 ಕೆ.ಜಿ. ಬೆಳ್ಳಿ ಮತ್ತು 2 ಕೆ.ಜಿ.ಯಷ್ಟು ಚಿನ್ನವಿದೆ.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

4 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

6 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

8 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

10 hours ago