BREAKING NEWS

ಅಶ್ವಥ್ ನಾರಾಯಣ ಅಲ್ಲ ನವರಂಗಿ ನಾರಾಯಣ : ಡಿ.ಕೆ ಶಿವಕುಮಾರ್

ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು ಅಶ್ವಥ್ ನಾರಾಯಣ್ ಅಲ್ಲ ಅವರು, ನವರಂಗಿ ನಾರಾಯಣ. ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು. ಅವರ ಇಲಾಖೆಯಲ್ಲಿ, ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನು ಎತ್ತಿ ಕಟ್ಟುತ್ತಿದ್ದಾರೆ ಎಲ್ಲ ಗೊತ್ತಿದೆ, ಎಲ್ಲಿಗೆ ಬೇಕಾದರೂ ಹೋಗಲಿ. ಸ್ವಾತಂತ್ರ್ಯ ದಿನಾಚರಣೆ ಆಗಲಿ ನಂತರ ಮಾತನಾಡುತ್ತೇನೆ ಎಂದರು.

ಕಳ್ಳರನ್ನು ರಕ್ಷಣೆ ಮಾಡುವುದರಲ್ಲಿ ಅಶ್ವಥ್ ನಾರಾಯಣ್ ಅವರಿಗೆ ಡಾಕ್ಟರೇಟ್ ಕೊಡಬೇಕು. ಆ ಮೆಂಟಲ್ ಟೆನ್ಷನ್‍ನಲ್ಲಿ ಇದ್ದಾರೆ. ಬೆಂಗಳೂರು ನಗರದಲ್ಲಿ, ಅವರ ಇಲಾಖೆಯಲ್ಲಿ ಏನು ಮಾಡಿದ್ರು ಅಂತ ಇನ್ನೂ ತೆಗೆದಿಲ್ಲ. ಟೈಮ್ ಬರುತ್ತೆ ಆಗ ಎಲ್ಲವೂ ಗೊತ್ತಾಗಲಿದೆ. ಕಂಪ್ಲೀಟ್ ಏನು ಮಾಡಿದ್ದರು, ಹೇಗೆ ಎತ್ತಿ ಕಟ್ಟಿದ್ದರು ಗೊತ್ತಾಗುತ್ತಿದೆ. ಕೆಲಸ ಯಾರು ಮಾಡಿದ್ದಾರೆ, ಯಾರು ನಿಜವಾಗಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ತನಿಖೆ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಏನೆಲ್ಲಾ ಆಟ ಆಡುತ್ತಿದ್ದಾರೆ ಆಡಲಿ. ಮೊನ್ನೆಯೇ ಈ ಬಗ್ಗೆ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿಯಲ್ಲಿ ಒಂದು ಆಕ್ಸಿಡೆಂಟ್ ಆಯ್ತು. ಇಂದೂ ಬೇಡ ಪಾರ್ಟಿ ಕೆಲಸ ಇದೆ. ಇಂಡಿಪೆಂಡೆನ್ಸ್ ಡೇ ಮುಗೀಲಿ ಮಾತನಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಪ್ರಾಮಾಣಿಕರಾಗಿದ್ದರೆ ಅಜ್ಜಯ್ಯನ ಮೇಲೆ ಆಣೆ ಮಾಡಲಿ ಎಂದಿದ್ದ ಸಿಟಿ ರವಿ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಸಿ.ಟಿ.ರವಿಗೂ ಟ್ರೀಟ್ ಮೆಂಟ್ ಬೇಕಾಗಿದೆ. ಟ್ರೀಟ್‍ಮೆಂಟ್ ಕೊಡೋಣ ಎಂದು ತಿಳಿಸಿದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago