BREAKING NEWS

ಅಶ್ವಥ್ ನಾರಾಯಣ ಅಲ್ಲ ನವರಂಗಿ ನಾರಾಯಣ : ಡಿ.ಕೆ ಶಿವಕುಮಾರ್

ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು ಅಶ್ವಥ್ ನಾರಾಯಣ್ ಅಲ್ಲ ಅವರು, ನವರಂಗಿ ನಾರಾಯಣ. ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು. ಅವರ ಇಲಾಖೆಯಲ್ಲಿ, ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನು ಎತ್ತಿ ಕಟ್ಟುತ್ತಿದ್ದಾರೆ ಎಲ್ಲ ಗೊತ್ತಿದೆ, ಎಲ್ಲಿಗೆ ಬೇಕಾದರೂ ಹೋಗಲಿ. ಸ್ವಾತಂತ್ರ್ಯ ದಿನಾಚರಣೆ ಆಗಲಿ ನಂತರ ಮಾತನಾಡುತ್ತೇನೆ ಎಂದರು.

ಕಳ್ಳರನ್ನು ರಕ್ಷಣೆ ಮಾಡುವುದರಲ್ಲಿ ಅಶ್ವಥ್ ನಾರಾಯಣ್ ಅವರಿಗೆ ಡಾಕ್ಟರೇಟ್ ಕೊಡಬೇಕು. ಆ ಮೆಂಟಲ್ ಟೆನ್ಷನ್‍ನಲ್ಲಿ ಇದ್ದಾರೆ. ಬೆಂಗಳೂರು ನಗರದಲ್ಲಿ, ಅವರ ಇಲಾಖೆಯಲ್ಲಿ ಏನು ಮಾಡಿದ್ರು ಅಂತ ಇನ್ನೂ ತೆಗೆದಿಲ್ಲ. ಟೈಮ್ ಬರುತ್ತೆ ಆಗ ಎಲ್ಲವೂ ಗೊತ್ತಾಗಲಿದೆ. ಕಂಪ್ಲೀಟ್ ಏನು ಮಾಡಿದ್ದರು, ಹೇಗೆ ಎತ್ತಿ ಕಟ್ಟಿದ್ದರು ಗೊತ್ತಾಗುತ್ತಿದೆ. ಕೆಲಸ ಯಾರು ಮಾಡಿದ್ದಾರೆ, ಯಾರು ನಿಜವಾಗಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ತನಿಖೆ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಏನೆಲ್ಲಾ ಆಟ ಆಡುತ್ತಿದ್ದಾರೆ ಆಡಲಿ. ಮೊನ್ನೆಯೇ ಈ ಬಗ್ಗೆ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿಯಲ್ಲಿ ಒಂದು ಆಕ್ಸಿಡೆಂಟ್ ಆಯ್ತು. ಇಂದೂ ಬೇಡ ಪಾರ್ಟಿ ಕೆಲಸ ಇದೆ. ಇಂಡಿಪೆಂಡೆನ್ಸ್ ಡೇ ಮುಗೀಲಿ ಮಾತನಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಪ್ರಾಮಾಣಿಕರಾಗಿದ್ದರೆ ಅಜ್ಜಯ್ಯನ ಮೇಲೆ ಆಣೆ ಮಾಡಲಿ ಎಂದಿದ್ದ ಸಿಟಿ ರವಿ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಸಿ.ಟಿ.ರವಿಗೂ ಟ್ರೀಟ್ ಮೆಂಟ್ ಬೇಕಾಗಿದೆ. ಟ್ರೀಟ್‍ಮೆಂಟ್ ಕೊಡೋಣ ಎಂದು ತಿಳಿಸಿದರು.

lokesh

Recent Posts

ಮೈಸೂರು ಅರಮನೆ ವೀಕ್ಷಣೆಗೂ ಬಂಕಿಂಗ್‌ ಹ್ಯಾಮ್‌ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…

23 mins ago

ರಾಜ್ಯದಲ್ಲಿ ಪದೇ ಪದೇ ಡ್ರಗ್ಸ್‌ ಜಾಲ ಪತ್ತೆ : ಪೊಲೀಸರನ್ನ ತೀವ್ರ ತರಾಟೆಗೆ ತೆಗೆದುಕೊಂಡ ಹೋಂ ಮಿನಿಸ್ಟರ್‌

ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…

53 mins ago

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ : ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…

1 hour ago

ನಾಳೆ ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…

1 hour ago

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

2 hours ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

2 hours ago