BREAKING NEWS

ಅಶ್ವಥ್ ನಾರಾಯಣ ಅಲ್ಲ ನವರಂಗಿ ನಾರಾಯಣ : ಡಿ.ಕೆ ಶಿವಕುಮಾರ್

ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು ಅಶ್ವಥ್ ನಾರಾಯಣ್ ಅಲ್ಲ ಅವರು, ನವರಂಗಿ ನಾರಾಯಣ. ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು. ಅವರ ಇಲಾಖೆಯಲ್ಲಿ, ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನು ಎತ್ತಿ ಕಟ್ಟುತ್ತಿದ್ದಾರೆ ಎಲ್ಲ ಗೊತ್ತಿದೆ, ಎಲ್ಲಿಗೆ ಬೇಕಾದರೂ ಹೋಗಲಿ. ಸ್ವಾತಂತ್ರ್ಯ ದಿನಾಚರಣೆ ಆಗಲಿ ನಂತರ ಮಾತನಾಡುತ್ತೇನೆ ಎಂದರು.

ಕಳ್ಳರನ್ನು ರಕ್ಷಣೆ ಮಾಡುವುದರಲ್ಲಿ ಅಶ್ವಥ್ ನಾರಾಯಣ್ ಅವರಿಗೆ ಡಾಕ್ಟರೇಟ್ ಕೊಡಬೇಕು. ಆ ಮೆಂಟಲ್ ಟೆನ್ಷನ್‍ನಲ್ಲಿ ಇದ್ದಾರೆ. ಬೆಂಗಳೂರು ನಗರದಲ್ಲಿ, ಅವರ ಇಲಾಖೆಯಲ್ಲಿ ಏನು ಮಾಡಿದ್ರು ಅಂತ ಇನ್ನೂ ತೆಗೆದಿಲ್ಲ. ಟೈಮ್ ಬರುತ್ತೆ ಆಗ ಎಲ್ಲವೂ ಗೊತ್ತಾಗಲಿದೆ. ಕಂಪ್ಲೀಟ್ ಏನು ಮಾಡಿದ್ದರು, ಹೇಗೆ ಎತ್ತಿ ಕಟ್ಟಿದ್ದರು ಗೊತ್ತಾಗುತ್ತಿದೆ. ಕೆಲಸ ಯಾರು ಮಾಡಿದ್ದಾರೆ, ಯಾರು ನಿಜವಾಗಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ತನಿಖೆ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಏನೆಲ್ಲಾ ಆಟ ಆಡುತ್ತಿದ್ದಾರೆ ಆಡಲಿ. ಮೊನ್ನೆಯೇ ಈ ಬಗ್ಗೆ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿಯಲ್ಲಿ ಒಂದು ಆಕ್ಸಿಡೆಂಟ್ ಆಯ್ತು. ಇಂದೂ ಬೇಡ ಪಾರ್ಟಿ ಕೆಲಸ ಇದೆ. ಇಂಡಿಪೆಂಡೆನ್ಸ್ ಡೇ ಮುಗೀಲಿ ಮಾತನಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಪ್ರಾಮಾಣಿಕರಾಗಿದ್ದರೆ ಅಜ್ಜಯ್ಯನ ಮೇಲೆ ಆಣೆ ಮಾಡಲಿ ಎಂದಿದ್ದ ಸಿಟಿ ರವಿ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಸಿ.ಟಿ.ರವಿಗೂ ಟ್ರೀಟ್ ಮೆಂಟ್ ಬೇಕಾಗಿದೆ. ಟ್ರೀಟ್‍ಮೆಂಟ್ ಕೊಡೋಣ ಎಂದು ತಿಳಿಸಿದರು.

lokesh

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

5 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

6 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

7 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

8 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

12 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

15 hours ago