ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು ಅಶ್ವಥ್ ನಾರಾಯಣ್ ಅಲ್ಲ ಅವರು, ನವರಂಗಿ ನಾರಾಯಣ. ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು. ಅವರ ಇಲಾಖೆಯಲ್ಲಿ, ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನು ಎತ್ತಿ ಕಟ್ಟುತ್ತಿದ್ದಾರೆ ಎಲ್ಲ ಗೊತ್ತಿದೆ, ಎಲ್ಲಿಗೆ ಬೇಕಾದರೂ ಹೋಗಲಿ. ಸ್ವಾತಂತ್ರ್ಯ ದಿನಾಚರಣೆ ಆಗಲಿ ನಂತರ ಮಾತನಾಡುತ್ತೇನೆ ಎಂದರು.
ಕಳ್ಳರನ್ನು ರಕ್ಷಣೆ ಮಾಡುವುದರಲ್ಲಿ ಅಶ್ವಥ್ ನಾರಾಯಣ್ ಅವರಿಗೆ ಡಾಕ್ಟರೇಟ್ ಕೊಡಬೇಕು. ಆ ಮೆಂಟಲ್ ಟೆನ್ಷನ್ನಲ್ಲಿ ಇದ್ದಾರೆ. ಬೆಂಗಳೂರು ನಗರದಲ್ಲಿ, ಅವರ ಇಲಾಖೆಯಲ್ಲಿ ಏನು ಮಾಡಿದ್ರು ಅಂತ ಇನ್ನೂ ತೆಗೆದಿಲ್ಲ. ಟೈಮ್ ಬರುತ್ತೆ ಆಗ ಎಲ್ಲವೂ ಗೊತ್ತಾಗಲಿದೆ. ಕಂಪ್ಲೀಟ್ ಏನು ಮಾಡಿದ್ದರು, ಹೇಗೆ ಎತ್ತಿ ಕಟ್ಟಿದ್ದರು ಗೊತ್ತಾಗುತ್ತಿದೆ. ಕೆಲಸ ಯಾರು ಮಾಡಿದ್ದಾರೆ, ಯಾರು ನಿಜವಾಗಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ತನಿಖೆ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಏನೆಲ್ಲಾ ಆಟ ಆಡುತ್ತಿದ್ದಾರೆ ಆಡಲಿ. ಮೊನ್ನೆಯೇ ಈ ಬಗ್ಗೆ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿಯಲ್ಲಿ ಒಂದು ಆಕ್ಸಿಡೆಂಟ್ ಆಯ್ತು. ಇಂದೂ ಬೇಡ ಪಾರ್ಟಿ ಕೆಲಸ ಇದೆ. ಇಂಡಿಪೆಂಡೆನ್ಸ್ ಡೇ ಮುಗೀಲಿ ಮಾತನಾಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ಪ್ರಾಮಾಣಿಕರಾಗಿದ್ದರೆ ಅಜ್ಜಯ್ಯನ ಮೇಲೆ ಆಣೆ ಮಾಡಲಿ ಎಂದಿದ್ದ ಸಿಟಿ ರವಿ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಸಿ.ಟಿ.ರವಿಗೂ ಟ್ರೀಟ್ ಮೆಂಟ್ ಬೇಕಾಗಿದೆ. ಟ್ರೀಟ್ಮೆಂಟ್ ಕೊಡೋಣ ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…